ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ.
ಈ ಕ್ರಮವು ಕೆಲವು ಶಾಸಕರು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಉಂಟಾಗಿರುವ ಅಸಮಾಧಾನವನ್ನು ತಡೆಗಟ್ಟುವ ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅವರನ್ನು ಒಂದುಗೂಡಿಸುವ ಗುರಿಯನ್ನು ಹೊಂದಿದೆ.
ಎಲ್ಲ ಶಾಸಕರಿಗೂ ಸಮಯದ ಬಗ್ಗೆ ಗೊಂದಲವಿತ್ತು. ಬೆಳಗ್ಗೆ 10ರಿಂದ 10.30ರವರೆಗೆ ಸಮಯ ನಿಗದಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರಿಗೂ ಸಮಯ ನಿಗಧಿಗೆ ನಿರ್ಧರಿಸಿದ್ದೇನೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಈ ಸಭೆಗಳು ಶಾಸಕರ ಮತ್ತು ಅವರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಆಲಿಸುವ ಮತ್ತು ಪರಿಹರಿಸುವ ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದರು.
ಡಿಕೆ ಶಿವಕುಮಾರ್ ಅವರು ಬೆಂಗಳೂರಿನಿಂದ ಹೊರಗಿರುವ ದಿನಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ದಿನಗಳಲ್ಲಿ ಈ ಸಭೆಗಳು ನಡೆಯುತ್ತವೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…