ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿಯ ಕಿಶೋರ್ ಕುಮಾರ್ ಅವರು 3654 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದು, 1957 ಮತ ಗಳಿಸಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇನ್ನು ಎಸ್ಡಿಪಿಐನ ಅನ್ವರ್ ಸಾದತ್ ಅವರು 195 ಮತಗಳನ್ನು ಪಡೆದಿದ್ದಾರೆ.
ಕಿಶೋರ್ ಕುಮಾರ್ ಅವರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಲೋಕಸಭೆ ಸದಸ್ಯರಾಗಿ ಆಯ್ಕೆಯಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆ ಸ್ಥಾನ ಭರ್ತಿಗಾಗಿ ಉಪಚುನಾವಣೆ ನಡೆದಿದ್ದು, ಅಕ್ಟೋಬರ್.21ರಂದು ಮತದಾನ ನಡೆದಿತ್ತು.
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…