ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರು ತಮ್ಮ ಮದುವೆ ಆಮಂತ್ರಣದ ಕರೆಯೋಲೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ.
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಕೆಲವು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಮೊದಲ ಮದುವೆ ಆಮಂತ್ರಣ ಕರೆಯೋಲೆಯನ್ನು ನೀಡಿ ಸಿದ್ದರಾಮಯ್ಯ ಅವರನ್ನು ಮದುವೆಗೆ ಆಹ್ವಾನಿಸಿದ್ದಾರೆ.
ಸ್ಯಾಂಡಲ್ವುಡ್ ನಟ ಧನಂಜಯ್ ಹಾಗೂ ವೈದ್ಯರಾದ ಧನ್ಯತಾ ಅವರು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಹೀಗಾಗಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿಸಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಮದುವೆ ಆಮಂತ್ರಣವನ್ನು ನೀಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಹ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಹೊಸ ಬದುಕಿಗೆ ಕಾಲಿಡುತ್ತಿರುವ ಜೋಡಿಗೆ ಶುಭಾಶಯಗಳು ಎಂದು ಪೋಸ್ಟ್ ಮಾಡಿದ್ದಾರೆ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…