ರಾಜ್ಯ

ಜನ ಬಯಸಿದಾಗ ದಲಿತ ಸಿಎಂ ಕೂಗು ಈಡೇರಲಿದೆ: ಸಚಿವ ಮಹದೇವಪ್ಪ

ಕಲಬುರಗಿ: ಪಕ್ಷ ನಿರ್ಣಯಿಸಿದಾಗ, ಜನ ಬಯಸಿದಾಗ ದಲಿತ ಮುಖ್ಯಮಂತ್ರಿ ಆಸೆ ಈಡೇರಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಹೆಚ್ಚಿದೆ. ಬಾಬಾ ಸಾಹೇಬ ಅಂಬೇಡ್ಕರ್‌ ಅವರು ದಲಿತರು ಅಧಿಕಾರದ ನಿರ್ಣಾಯಕ ಸ್ಥಾನದಲ್ಲಿರಬೇಕೆಂದು ಬಯಸಿದ್ದರು. ಪಕ್ಷ ಹಾಗೂ ಜನ ಬಯಸಿದರೆ ದಲಿತ ಸಿಎಂ ಕೂಗು ಈಡೇರಲಿದೆ ಎಂದು ಹೇಳಿದರು.

ಎಸ್‍ಇಪಿಟಿಎಸ್‍ಪಿ ಹಣವನ್ನು ಬಳಕೆ ಮಾಡುವ ಸಂಬಂಧ ದಲಿತ ಸಂಘಟನೆಗಳ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ನಮ್ಮ ಸರ್ಕಾರ ಅದನ್ನು ಪರಿಶೀಲನೆ ಮಾಡುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಎಸ್‍ಇಪಿಟಿಎಸ್‍ಪಿಯನ್ನು ಸಾಮಾನ್ಯ ವರ್ಗಕ್ಕೆ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಜಾತಿ/ಪಂಗಡದ ಜನರಿಗೆ ಮಾತ್ರ ಈ ಹಣ ಬಳಕೆ ಮಾಡಲಾಗುತ್ತಿದೆ. ಜನ ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವಿವರಣೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

7 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

7 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

7 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

7 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

10 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

10 hours ago