ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್, ಕಲ್ಲಂಗಡಿ, ಬಟಾಣಿಗೆ ಬಳಸುವ ಕೃತಕ ಬಣ್ಣದಲ್ಲೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಬೆನ್ನಲ್ಲೇ ಟಮೊಟೋ ಸಾಸ್ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುತ್ತಿರುವ ಬಗ್ಗೆ ವರದಿ ಬಹಿರಂಗಪಡಿಸಿದೆ.
ಆಹಾರ ಪ್ರಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುವ ಟಮೋಟೋ ಸಾಸ್ನಲ್ಲೂ ರಾಸಾಯನಿಕ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಇದು ಆರೋಗ್ಯಕ್ಕೆ ಭಾರೀ ಹಾನಿಯನ್ನುಂಟು ಮಾಡುತ್ತದೆ ಎಂದು ವರದಿ ಬಹಿರಂಗಪಡಿಸಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.
ಕಳೆದ ಫೆಬ್ರವರಿಯಲ್ಲಿ ಟಮೋಟೋ ಸಾಸ್ ಮಾದರಿಯನ್ನು ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿಯು ಅಧಿಕಾರಿಗಳ ಕೈ ಸೇರಿದ್ದು, ವರದಿಯಲ್ಲಿ ಅನ್ಸೇಫ್ ಎಂದು ಬಂದಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ ಸಾಸ್ನಲ್ಲಿ ರಾಸಾಯನಿಕ ಬಳಕೆಯಿಂದ ಉಪ್ಪಿನ ಪ್ರಮಾಣ ಅಧಿಕವಾಗಿರುತ್ತದೆ. ಈ ಸಾಸ್ ತಿನ್ನುವುದರಿಂದ ರಕ್ತದೊತ್ತಡ ಅಧಿಕವಾಗುತ್ತದೆ. ನಿಶಕ್ತಿಗೆ ಕಾರಣವಾಗುತ್ತದೆ. ಇದನ್ನು ತಿನ್ನುವುದರಿಂದ ತಾಳ್ಮೆ ಮತ್ತು ಶಾಂತ ಮನಸ್ಥಿತಿ ಕಡಿಮೆಯಾಗುತ್ತದೆ. ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ ಎಂದು ಹೇಳಲಾಗಿದೆ.
ಮತ್ತಷ್ಟು ಆತಂಕಕ್ಕಾರಿ ಮಾಹಿತಿಯೆಂದರೆ ಬೆಲ್ಲ, ಚಿಪ್ಸ್, ಪ್ರೈ ಬಟಾಣಿ ಪದಾರ್ಥಗಳಿಗೂ ಕೂಡ ರಾಸಾಯನಿಕ ಮಾಡುತ್ತಿರುವುದು ಬಯಲಾಗಿದೆ.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…