ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್, ಕಲ್ಲಂಗಡಿ, ಬಟಾಣಿಗೆ ಬಳಸುವ ಕೃತಕ ಬಣ್ಣದಲ್ಲೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಬೆನ್ನಲ್ಲೇ ಟಮೊಟೋ ಸಾಸ್ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುತ್ತಿರುವ ಬಗ್ಗೆ ವರದಿ ಬಹಿರಂಗಪಡಿಸಿದೆ.
ಆಹಾರ ಪ್ರಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುವ ಟಮೋಟೋ ಸಾಸ್ನಲ್ಲೂ ರಾಸಾಯನಿಕ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಇದು ಆರೋಗ್ಯಕ್ಕೆ ಭಾರೀ ಹಾನಿಯನ್ನುಂಟು ಮಾಡುತ್ತದೆ ಎಂದು ವರದಿ ಬಹಿರಂಗಪಡಿಸಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.
ಕಳೆದ ಫೆಬ್ರವರಿಯಲ್ಲಿ ಟಮೋಟೋ ಸಾಸ್ ಮಾದರಿಯನ್ನು ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿಯು ಅಧಿಕಾರಿಗಳ ಕೈ ಸೇರಿದ್ದು, ವರದಿಯಲ್ಲಿ ಅನ್ಸೇಫ್ ಎಂದು ಬಂದಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ ಸಾಸ್ನಲ್ಲಿ ರಾಸಾಯನಿಕ ಬಳಕೆಯಿಂದ ಉಪ್ಪಿನ ಪ್ರಮಾಣ ಅಧಿಕವಾಗಿರುತ್ತದೆ. ಈ ಸಾಸ್ ತಿನ್ನುವುದರಿಂದ ರಕ್ತದೊತ್ತಡ ಅಧಿಕವಾಗುತ್ತದೆ. ನಿಶಕ್ತಿಗೆ ಕಾರಣವಾಗುತ್ತದೆ. ಇದನ್ನು ತಿನ್ನುವುದರಿಂದ ತಾಳ್ಮೆ ಮತ್ತು ಶಾಂತ ಮನಸ್ಥಿತಿ ಕಡಿಮೆಯಾಗುತ್ತದೆ. ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ ಎಂದು ಹೇಳಲಾಗಿದೆ.
ಮತ್ತಷ್ಟು ಆತಂಕಕ್ಕಾರಿ ಮಾಹಿತಿಯೆಂದರೆ ಬೆಲ್ಲ, ಚಿಪ್ಸ್, ಪ್ರೈ ಬಟಾಣಿ ಪದಾರ್ಥಗಳಿಗೂ ಕೂಡ ರಾಸಾಯನಿಕ ಮಾಡುತ್ತಿರುವುದು ಬಯಲಾಗಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…