ಬೆಂಗಳೂರು: ಚಿತ್ರದುರ್ಗ ಮೂಲದ ರೇಣಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನಗರದ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಬಿಗ್ ಶಾಕ್ ಆಗಿದೆ.
ಇದರಿಂದ ದರ್ಶನ್ ಬಳ್ಳಾರಿ ಜೈಲೇ ಅನಿವಾರ್ಯವಾಗಿದೆ. ಅವರು ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ.
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಜೂನ್11ರಲ್ಲಿ ಅರೆಸ್ಟ್ ಆದರು. ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಕಾರಾಗೃಹದಲ್ಲಿ ಇರಿಸಲಾಗಿತ್ತು. ಅಲ್ಲಿ, ಅವರು ಐಷರಾಮಿ ವ್ಯವಸ್ಥೆ ಪಡೆದ ಕಾರಣ ದರ್ಶನ್ನ್ನು ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ, ಈ ತೀರ್ಪಿನಿಂದ ಅವರಿಗೆ ಬಳ್ಳಾರಿ ಜೈಲೇ ಗತಿಯಾಗಿದೆ.
ಇನ್ನೂ ದರ್ಶನ್ಗೆ ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ ಅವರು ಬೆಂಗಳೂರಿನ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಈಗಾಗಲೇ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದು, ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್ ಆಗಲು ಸಕಲ ವ್ಯವಸ್ಥೆ ನಡೆದಿದೆ ಎನ್ನಲಾಗಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…