ರಾಜ್ಯ

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನು ಅರ್ಜಿ ಇಂದು(ಅ.4) ವಿಚಾರಣೆ ನಡೆದಿದ್ದು, ಸುದೀರ್ಘ ವಾದ ಮಂಡನೆಯ ಬಳಿಕ ನಾಳೆ ಮಧ್ಯಾಹ್ನ 12.30ಕ್ಕೆ 57ನೇ ಸಿಸಿಎಚ್‌ ಕೋರ್ಟ್‌ನಲ್ಲಿ ವಿಚಾರಣೆಯನ್ನು ಮುಂದೂಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಂ.2 ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕಳೆದ ಎರಡೂ ವಾರಗಳಿಂದಲೂ ಕೆಲವು ಕಾರಣಗಳಿಗೆ ಕೋರ್ಟ್‌ ಮುಂದೂಡುತ್ತಲೇ ಇತ್ತು. ಆದರೆ ಇಂದು(ಅ.4) ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು ದರ್ಶನ್‌ ಪರ ನ್ಯಾಯಾಲಯದಲ್ಲಿ ನ್ಯಾಯ ಮಂಡಿಸಿ, ದಿನ ಅಂತ್ಯಕ್ಕೆ ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂಡೂಡುವಂತೆ ಮಾಡಿದ್ದಾರೆ.

ಎಸ್‌ಪಿಪಿ ಪ್ರಸನ್ನಕುಮಾರ್‌ ಹಾಜರಿಯಲ್ಲಿ ವಾದ ಮಂಡನೆ ಪ್ರಾರಂಭಿಸಿದ ಸಿ.ವಿ.ನಾಗೇಶ್‌, ಈ ಪ್ರಕರಣದಲ್ಲಿ ಎಲ್ಲಾ ಮಾಧ್ಯಮಗಳು ಆರೋಪಿ 2 ದರ್ಶನ್‌ ಅವರನ್ನೇ ಅಪರಾಧಿ ಎಂದೇ ಬಿಂಬಿಸಿವೆ. ಅಲ್ಲದೇ ಎಸ್‌ಪಿಪಿ ಅವರು ಪೊಲೀಸರ ತನಿಖೆಯನ್ನು ಅತ್ಯುತ್ತಮ ತನಿಖೆ ಎಂದಿದ್ದಾರೆ. ಆದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇದೊಂದು ಕಳಪೆ ತನಿಖಾ ವರದಿ ಎಂದು ದೂರಿದರು. ಪ್ರಕರಣಕ್ಕೆ ಕುರಿತಂತೆ ವಾದದ ಟಿಪ್ಪಣಿ ಸಲ್ಲಿಸಿದ ನಂತರ ಎರಡು ಸುಪ್ರೀಂಕೋರ್ಟ್‌ನ ಆದೇಶಗಳನ್ನು ಕೂಡ ನ್ಯಾಯಾಲಯದಲ್ಲಿ ವಾದ ಮಾಡುವ ಸಂದರ್ಭದಲ್ಲಿ ಮಂಡಿಸಿದರು.

ದರ್ಶನ್‌ ವಿರುದ್ಧ ತನಿಖಾ ವೇಳೆಯಲ್ಲಿ ಸಾಂದರ್ಭಿಕ, ಪ್ರತ್ಯಕ್ಷ ಸಾಕ್ಷಿಗಳನ್ನು ಹೆಸರಿಸಲಾಗಿದೆ. ಆದರೆ ಆ ಎಲ್ಲಾ ಸಾಕ್ಷಿಗಳು ಸೃಷ್ಠಿಸಿರುವ ಸಾಕ್ಷಿಗಳಾಗಿವೆ. ಜೂನ್‌ 12 ರಿಂದಲೇ ದಾಖಲೆ ಸೃಷ್ಠಿಸುವ ಕಾರ್ಯ ನಡೆದಿದ್ದು, ನೈಲಾನ್‌ ಹಗ್ಗ, ಮರದ ಕೊಂಬೆ ಹಾಗೂ ನೀರಿನ ಬಾಟಲ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಈ ಎಲ್ಲಾ ವಸ್ತುಗಳು ಜೂನ್‌ 9 ರಂದೇ ಪೊಲೀಸ್‌ರ ವಶದಲ್ಲಿದ್ದವು ಎಂದು ತನಿಖಾಧಿಕಾರಿಯ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಆರೋಪಿ ಹೇಳಿಕೆ ಮೇಲೆ ಜೂ.12 ರಂದು ರಿಕವರಿ ಮಾಡಿಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಜೂನ್‌ 12 ರಂದು ಕತ್ತಲೆಯಲ್ಲಿ ಪಂಚನಾಮೆ ರಿಕವರಿ ಮಾಡಿದ್ದು, ಪೊಲೀಸರಿಗೆ ಬೆಳಗ್ಗೆ ಸಿಗದಿದ್ದು ಪಂಚನಾಮೆ ವೇಳೆ ಹೇಗೆ ಸಿಕ್ಕಿತಂತೆ ಎಂದು ಪ್ರಶ್ನಿಸಿದ್ದಾರೆ.

ಆರೋಪಿ ದರ್ಶನ್‌ ಹೇಳಿಕೆಯನ್ನು ಜೂ.11 ರಂದೇ ಹೇಳಿಕೆಯಲ್ಲಿ ದಾಖಲಿಸಲಾಗಿದೆ. ಈ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಿದ ಸ್ಥಳ ತೋರಿಸುತ್ತೇನೆ ಎಂದಿದೆ. ಆದರೆ ಅದೇ ದಿನ ಪೊಲೀಸರು ಸ್ಥಳಕ್ಕೆ ದರ್ಶನ್‌ ಅನ್ನು ಸ್ಥಳಕ್ಕೆ ಕರೆದೊಯ್ದಿಲ್ಲ. ಜೂ.10 ರಂದು ಆರೋಪಿ ಎ4ನ ಸ್ವಇಚ್ಛಾ ಹೇಳಿಕೆಯಲ್ಲಿ ಸ್ಥಳದ ವಿವರವಿದೆ. ಪಿಎಸ್‌ಐ ವಿನಯ್‌ ಹೇಳಿಕೆಯಲ್ಲಿ ಜೂ.8 ರಂದು ಮಾಹಿತಿ ಇತ್ತೆಂದಿದೆ. ಆರೋಪಿ ಪ್ರದೋಷ್‌ ಜೂ.8 ರ ಮಧ್ಯರಾತ್ರಿ ವಿನಯ್‌ಗೆ ಕರೆ ಮಾಡಿದ್ದ. ಮೂವರು ಹಣದ ವಿಷಯಕ್ಕೆ ಕೊಲೆ ಮಾಡಿದ್ದಾಗಿ ಹೇಳಿದ್ದಾರೆ. ಅಲ್ಲದೇ ಈ ವಿಷಯವನ್ನು ಸರ್ಕಲ್‌ ಇನ್ಸ್‌ಪೆಕ್ಟರ್‌ಗೆ ತಿಳಿಸಲಾಗಿದೆ. ಬಳಿಕ ಪ್ರತ್ಯಕ್ಷದರ್ಶಿ ಹೇಳಿಕೆ ಪ್ರಕಾರವೇ ಜೂ.9 ರಂದು ಪೊಲೀಸರು ಷೆಡ್‌ಗೆ ಬಂದು ತನಿಖೆಗೆ ಸಂಬಂಧಪಟ್ಟ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯಕ್ಷ ಸಾಕ್ಷಿ ಆಗಿರುವ ವಾಚ್‌ಮ್ಯಾನ್‌ ಹಿಂದಿ ಭಾಷೆಯಲ್ಲಿ ನೀಡಿರುವ 164 ಹೇಳಿಕೆಯನ್ನು ಕನ್ನಡಕ್ಕೆ ತರ್ಜುಮೆ ಮಾಡಿ ಓದಿದ ನಾಗೇಶ್‌, ಜೂ.9 ರಂದಿ ಪೊಲೀಸರು ಬಂದು ಶೆಡ್‌ನ್ನು ಸೀಜ್‌ ಮಾಡಿದ್ದು, ಮರದಕೊಂಬೆ, ಲಾಠಿ ಹಾಗೂ ನೈಲಾನ್ ಹಗ್ಗ ಎಲ್ಲವನ್ನೂ ವಶಕ್ಕೆ ಪಡೆದಿದ್ದರು. ಆದರೆ ದರ್ಶನ್‌ ಹೇಳಿಕೆ ಪ್ರಕಾರ ಜೂ.12 ರಂದು ವಶಕ್ಕೆ ಎಂದು ಹೇಳಿರುವುದೇಕೆ? ಇದು ಸಾಕ್ಷ್ಯ ತಿರುಚುವಿಕೆ ಅಲ್ಲವೇ? ಸೀಜ್‌ ಮಾಡಿದ ಮೂರು ದಿನ ಪೊಲೀಸರು ಏನು ಮಾಡುತ್ತಿದ್ದರು? ಎಂದು ಹಿರಿಯ ವಕೀಲ ಸಿ.ವಿ.ನಾಗೇಶ್‌ ಪ್ರಶ್ನೆ ಮಾಡಿದ್ದಾರೆ. ಬಳಿಕ ವಾದ ಆಲಿಸಿದ ಕೋರ್ಟ್‌ ನಾಳೆ ಶನಿವಾರ (ಅ.5) ಮಧ್ಯಾಹ್ನ 12.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಉಳಿದ ಆರೋಪಿಗಳ ಜಾಮೀನು ಅರ್ಜಿಗಳು ಸಹ ಮುಂದೂಡಿಕೆ ಆಗಿವೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

1 hour ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

4 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

21 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

23 hours ago