ರಾಜ್ಯ

ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ನಟ ದರ್ಶನ್‌ ಮತ್ತು ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಇಂದು ಸೆಷನ್‌ ಕೋರ್ಟ್‌ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ನಟ ದರ್ಶನ್‌, ನಟಿ ಪವಿತ್ರಗೌಡ, ವಿನಯ್‌ ಸೇರಿ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಕೋರ್ಟ್‌ನಲ್ಲಿ ದರ್ಶನ್‌ ಪರ ವಕೀಲ ಸುನೀಲ್‌, ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್‌ ವಾದ ಮಂಡಿಸಲಿದ್ದಾರೆ.

ಸರ್ಕಾರಿ ಅಭಿಯೋಜಕರು ಶುಕ್ರವಾರವೇ ದರ್ಶನ್‌ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ದರ್ಶನ್‌ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರು. ಹೀಗಾಗಿ, ದರ್ಶನ್‌ ಸೇರಿದಂತೆ ಇತರರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎಂಬುದು ಕಾದು ನೋಡಬೇಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು-ಖಾಸಗಿ ಬಸ್‌ ಡಿಕ್ಕಿ : 6 ಮಂದಿ ಸಜೀವ ದಹನ

ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…

18 mins ago

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ವಿಎಫ್‌ಎಕ್ಸ್‌, ಗ್ರಾಫಿಕ್ಸ್‌ಗೆ ನೆರೆರಾಜ್ಯಗಳತ್ತ ಐಟಿ ನಗರದ ಸಿನಿಮಂದಿ

ವೈಡ್‌ ಆಂಗಲ್‌ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…

2 hours ago

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…

2 hours ago

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…

2 hours ago

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

3 hours ago