ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ನಟ ದರ್ಶನ್ ಪ್ರಕರಣಕ್ಕೆ ತಿರುವು ಪಡೆಯುವ ಹಂತದಲ್ಲಿಯೇ ದಿಢೀರ್ ಬದಲಾವಣೆ ನಡೆದಿದೆ.
ಈ ರೇಣುಕಾಸ್ವಾಮಿ ಪ್ರಕರಣದ ಮುಖ್ಯ ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ನೂತನ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ದರ್ಶನ್ ಪ್ರರಕಣದ ತನಿಖೆ ಮಾಡುತ್ತಿದ್ದರು. ಇವರನ್ನು ಇಂದು ದಿಢೀರ್ ಬದಲಾಣೆ ಮಾಡಿದ್ದು, ಅವರ ಜಾಗಕ್ಕೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇಂದಿನಿಂದ ಈ ತನಿಖೆ ಚಂದನ್ ಅವರಿಂದ ಮುಂದುವರೆಯಲಿದೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಿ.ಕೆ ಅಚ್ಚುಕಟ್ಟು ಠಾಣೆಯಿಂದ ಗಿರೀಶ್ ನಾಯ್ಕ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾಯಿಸಲಾಗಿತ್ತು. ಈ ಎರಡು ದಿನಗಳ ಹಿಂದೆ ತಮ್ಮ ಈ ಹಿಂದಿನ ಠಾಣೆಗೆ ವಾಪಸ್ ಮರಳಲು ಆದೇಶ ಬಂದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಪ್ರಕರಣದಿಂದ ಗಿರೀಶ್ ಹೊರ ನಡೆದಿದ್ದಾರೆ. ಹೀಗಾಗಿ ಈ ಪ್ರಕರಣದ ಜಾವಾಬ್ದಾರಿ ಸಂಪೂರ್ಣವಾಗಿ ಎಸಿಪಿ ಚಂದನ್ ಅವರ ಹೆಗಲ ಮೇಲೆ ಬಿದ್ದಿದೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…