ರಾಜ್ಯ

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು ದಿನ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್‌ವುಡ್‌ ʻದಾಸʼನಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದ್ದು, ಜೈಲಲ್ಲಿ 100ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜೂನ್‌ 8 ರಂದು ರೇಣುಕಾಸ್ವಾಮಿ ಕೊಲೆ ನಡೆಯಿತು. ಜೂನ್‌ 11ರಂದು ಮೈಸೂರಿನ ಹೋಟೆಲ್‌ನಲ್ಲಿ ದರ್ಶನ್‌ ಬಂಧನ ಆಯಿತು. ಕೊಲೆ ನಡೆದ ಮೂರು ದಿನದೊಳಗೆ ನಟನ ಬಂಧನವಾಯಿತು. ಅದೇ ದಿನ ದರ್ಶನ್‌ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆದಂತಿದ್ದರು. ಆ ಬಳಿಕ ಕೇಸ್‌ನಲ್ಲಿ ಭಾಗಿಯಾದ ಇತರ 16 ಆರೋಪಿಗಳನ್ನು ಬಂಧಿಸಲಾಯಿತು. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ಕೇಸ್‌ ಸಂಬಂಧ ದರ್ಶನ್‌ ಅವರನ್ನು 12ದಿನ ಪೊಲೀಸರು ವಿಚಾರಣೆ ನಡೆಸಿದ್ದರು.

 

ಬಳಿಕ ಕೋರ್ಟ್‌ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿತು. ಹೀಗಾಗಿ, ದಾಸ ಪರಪ್ಪನ ಅಗ್ರಹಾರ ಸೇರಿದ್ದರು. ಅಲ್ಲಿ ಸುಮಾರು ಎರಡು ತಿಂಗಳು ಇದ್ದ ಅವರಿಗೆ ರೌಡಿ ವಿಲ್ಸನ್‌ ಗಾರ್ಡನ್‌ ನಾಗ ಅಂಡ್‌ ಟೀಂ ಟೀ ಪಾರ್ಟಿ ನೀಡಿದ್ದ ಫೋಟೋ ವೈರಲ್‌ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಯಿತು. ಸದ್ಯ ದರ್ಶನ್‌ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟಂಬರ್‌ 30 ರವರೆಗೆ ವಿಸ್ತರಣೆ ಆಗಿದೆ. ಅಂದ್ಹಾಗೆ ದರ್ಶನ್‌ ಈ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದಾರೆ.

ಇನ್ನು ತಮ್ಮ ನೆಚ್ಚಿನ ನಟನ ದುಸ್ಥಿತಿ ಕಂಡು ಅಭಿಮಾನಿಗಳು ಬೇಸರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರತಿ ಸಿನಿಮಾ ರೀಲಿಸ್‌ ಆಗಿ 100ದಿನ ಬಾರಿಸಿದಾಗ ಅದ್ದೂರಿಯಾಗಿ ಸಂಭ್ರಮಿಸುತ್ತಿದ್ದ ಅಭಿಮಾನಿಗಳಿಗೆ ದಿಕ್ಕು ತೋಚದಾಗಿದೆ. ಇದೀಗ ತನ್ನ ನೆಚ್ಚಿನ ನಟ ಜೈಲಲ್ಲಿ 100ದಿನ ಕಳೆಯುವಂತಾಗಿರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಸಿದೆ.

ಅಷ್ಟೇ ಅಲ್ಲದೇ, ದರ್ಶನ್‌ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ʻಬಾಸ್‌ ಹೊರಗಿರಲಿ, ಒಳಗಿರಲಿʼ 100ದಿನ ಫಿಕ್ಸ್‌ ಎಂದು ಪೋಸ್ಟ್‌ ಮಾಡುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

26 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

58 mins ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

1 hour ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

3 hours ago

ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…

4 hours ago

‌ಶಾಮನೂರು | ಓದಿದ್ದು 10ನೇ ತರಗತಿ ; ಕಟ್ಟಿದ್ದು ಬೃಹತ್ ಶಿಕ್ಷಣ ಸಾಮ್ರಾಜ್ಯ…..!

ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…

4 hours ago