ರಾಜ್ಯ

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು ದಿನ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್‌ವುಡ್‌ ʻದಾಸʼನಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದ್ದು, ಜೈಲಲ್ಲಿ 100ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜೂನ್‌ 8 ರಂದು ರೇಣುಕಾಸ್ವಾಮಿ ಕೊಲೆ ನಡೆಯಿತು. ಜೂನ್‌ 11ರಂದು ಮೈಸೂರಿನ ಹೋಟೆಲ್‌ನಲ್ಲಿ ದರ್ಶನ್‌ ಬಂಧನ ಆಯಿತು. ಕೊಲೆ ನಡೆದ ಮೂರು ದಿನದೊಳಗೆ ನಟನ ಬಂಧನವಾಯಿತು. ಅದೇ ದಿನ ದರ್ಶನ್‌ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆದಂತಿದ್ದರು. ಆ ಬಳಿಕ ಕೇಸ್‌ನಲ್ಲಿ ಭಾಗಿಯಾದ ಇತರ 16 ಆರೋಪಿಗಳನ್ನು ಬಂಧಿಸಲಾಯಿತು. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ಕೇಸ್‌ ಸಂಬಂಧ ದರ್ಶನ್‌ ಅವರನ್ನು 12ದಿನ ಪೊಲೀಸರು ವಿಚಾರಣೆ ನಡೆಸಿದ್ದರು.

 

ಬಳಿಕ ಕೋರ್ಟ್‌ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿತು. ಹೀಗಾಗಿ, ದಾಸ ಪರಪ್ಪನ ಅಗ್ರಹಾರ ಸೇರಿದ್ದರು. ಅಲ್ಲಿ ಸುಮಾರು ಎರಡು ತಿಂಗಳು ಇದ್ದ ಅವರಿಗೆ ರೌಡಿ ವಿಲ್ಸನ್‌ ಗಾರ್ಡನ್‌ ನಾಗ ಅಂಡ್‌ ಟೀಂ ಟೀ ಪಾರ್ಟಿ ನೀಡಿದ್ದ ಫೋಟೋ ವೈರಲ್‌ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಯಿತು. ಸದ್ಯ ದರ್ಶನ್‌ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟಂಬರ್‌ 30 ರವರೆಗೆ ವಿಸ್ತರಣೆ ಆಗಿದೆ. ಅಂದ್ಹಾಗೆ ದರ್ಶನ್‌ ಈ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದಾರೆ.

ಇನ್ನು ತಮ್ಮ ನೆಚ್ಚಿನ ನಟನ ದುಸ್ಥಿತಿ ಕಂಡು ಅಭಿಮಾನಿಗಳು ಬೇಸರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರತಿ ಸಿನಿಮಾ ರೀಲಿಸ್‌ ಆಗಿ 100ದಿನ ಬಾರಿಸಿದಾಗ ಅದ್ದೂರಿಯಾಗಿ ಸಂಭ್ರಮಿಸುತ್ತಿದ್ದ ಅಭಿಮಾನಿಗಳಿಗೆ ದಿಕ್ಕು ತೋಚದಾಗಿದೆ. ಇದೀಗ ತನ್ನ ನೆಚ್ಚಿನ ನಟ ಜೈಲಲ್ಲಿ 100ದಿನ ಕಳೆಯುವಂತಾಗಿರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಸಿದೆ.

ಅಷ್ಟೇ ಅಲ್ಲದೇ, ದರ್ಶನ್‌ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ʻಬಾಸ್‌ ಹೊರಗಿರಲಿ, ಒಳಗಿರಲಿʼ 100ದಿನ ಫಿಕ್ಸ್‌ ಎಂದು ಪೋಸ್ಟ್‌ ಮಾಡುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago