ರಾಜ್ಯ

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು ದಿನ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್‌ವುಡ್‌ ʻದಾಸʼನಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದ್ದು, ಜೈಲಲ್ಲಿ 100ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜೂನ್‌ 8 ರಂದು ರೇಣುಕಾಸ್ವಾಮಿ ಕೊಲೆ ನಡೆಯಿತು. ಜೂನ್‌ 11ರಂದು ಮೈಸೂರಿನ ಹೋಟೆಲ್‌ನಲ್ಲಿ ದರ್ಶನ್‌ ಬಂಧನ ಆಯಿತು. ಕೊಲೆ ನಡೆದ ಮೂರು ದಿನದೊಳಗೆ ನಟನ ಬಂಧನವಾಯಿತು. ಅದೇ ದಿನ ದರ್ಶನ್‌ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆದಂತಿದ್ದರು. ಆ ಬಳಿಕ ಕೇಸ್‌ನಲ್ಲಿ ಭಾಗಿಯಾದ ಇತರ 16 ಆರೋಪಿಗಳನ್ನು ಬಂಧಿಸಲಾಯಿತು. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ಕೇಸ್‌ ಸಂಬಂಧ ದರ್ಶನ್‌ ಅವರನ್ನು 12ದಿನ ಪೊಲೀಸರು ವಿಚಾರಣೆ ನಡೆಸಿದ್ದರು.

 

ಬಳಿಕ ಕೋರ್ಟ್‌ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿತು. ಹೀಗಾಗಿ, ದಾಸ ಪರಪ್ಪನ ಅಗ್ರಹಾರ ಸೇರಿದ್ದರು. ಅಲ್ಲಿ ಸುಮಾರು ಎರಡು ತಿಂಗಳು ಇದ್ದ ಅವರಿಗೆ ರೌಡಿ ವಿಲ್ಸನ್‌ ಗಾರ್ಡನ್‌ ನಾಗ ಅಂಡ್‌ ಟೀಂ ಟೀ ಪಾರ್ಟಿ ನೀಡಿದ್ದ ಫೋಟೋ ವೈರಲ್‌ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಯಿತು. ಸದ್ಯ ದರ್ಶನ್‌ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟಂಬರ್‌ 30 ರವರೆಗೆ ವಿಸ್ತರಣೆ ಆಗಿದೆ. ಅಂದ್ಹಾಗೆ ದರ್ಶನ್‌ ಈ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದಾರೆ.

ಇನ್ನು ತಮ್ಮ ನೆಚ್ಚಿನ ನಟನ ದುಸ್ಥಿತಿ ಕಂಡು ಅಭಿಮಾನಿಗಳು ಬೇಸರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರತಿ ಸಿನಿಮಾ ರೀಲಿಸ್‌ ಆಗಿ 100ದಿನ ಬಾರಿಸಿದಾಗ ಅದ್ದೂರಿಯಾಗಿ ಸಂಭ್ರಮಿಸುತ್ತಿದ್ದ ಅಭಿಮಾನಿಗಳಿಗೆ ದಿಕ್ಕು ತೋಚದಾಗಿದೆ. ಇದೀಗ ತನ್ನ ನೆಚ್ಚಿನ ನಟ ಜೈಲಲ್ಲಿ 100ದಿನ ಕಳೆಯುವಂತಾಗಿರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಸಿದೆ.

ಅಷ್ಟೇ ಅಲ್ಲದೇ, ದರ್ಶನ್‌ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ʻಬಾಸ್‌ ಹೊರಗಿರಲಿ, ಒಳಗಿರಲಿʼ 100ದಿನ ಫಿಕ್ಸ್‌ ಎಂದು ಪೋಸ್ಟ್‌ ಮಾಡುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago