ರಾಜ್ಯ

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು ದಿನ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್‌ವುಡ್‌ ʻದಾಸʼನಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದ್ದು, ಜೈಲಲ್ಲಿ 100ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜೂನ್‌ 8 ರಂದು ರೇಣುಕಾಸ್ವಾಮಿ ಕೊಲೆ ನಡೆಯಿತು. ಜೂನ್‌ 11ರಂದು ಮೈಸೂರಿನ ಹೋಟೆಲ್‌ನಲ್ಲಿ ದರ್ಶನ್‌ ಬಂಧನ ಆಯಿತು. ಕೊಲೆ ನಡೆದ ಮೂರು ದಿನದೊಳಗೆ ನಟನ ಬಂಧನವಾಯಿತು. ಅದೇ ದಿನ ದರ್ಶನ್‌ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆದಂತಿದ್ದರು. ಆ ಬಳಿಕ ಕೇಸ್‌ನಲ್ಲಿ ಭಾಗಿಯಾದ ಇತರ 16 ಆರೋಪಿಗಳನ್ನು ಬಂಧಿಸಲಾಯಿತು. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ಕೇಸ್‌ ಸಂಬಂಧ ದರ್ಶನ್‌ ಅವರನ್ನು 12ದಿನ ಪೊಲೀಸರು ವಿಚಾರಣೆ ನಡೆಸಿದ್ದರು.

 

ಬಳಿಕ ಕೋರ್ಟ್‌ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಿತು. ಹೀಗಾಗಿ, ದಾಸ ಪರಪ್ಪನ ಅಗ್ರಹಾರ ಸೇರಿದ್ದರು. ಅಲ್ಲಿ ಸುಮಾರು ಎರಡು ತಿಂಗಳು ಇದ್ದ ಅವರಿಗೆ ರೌಡಿ ವಿಲ್ಸನ್‌ ಗಾರ್ಡನ್‌ ನಾಗ ಅಂಡ್‌ ಟೀಂ ಟೀ ಪಾರ್ಟಿ ನೀಡಿದ್ದ ಫೋಟೋ ವೈರಲ್‌ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಯಿತು. ಸದ್ಯ ದರ್ಶನ್‌ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟಂಬರ್‌ 30 ರವರೆಗೆ ವಿಸ್ತರಣೆ ಆಗಿದೆ. ಅಂದ್ಹಾಗೆ ದರ್ಶನ್‌ ಈ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದಾರೆ.

ಇನ್ನು ತಮ್ಮ ನೆಚ್ಚಿನ ನಟನ ದುಸ್ಥಿತಿ ಕಂಡು ಅಭಿಮಾನಿಗಳು ಬೇಸರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರತಿ ಸಿನಿಮಾ ರೀಲಿಸ್‌ ಆಗಿ 100ದಿನ ಬಾರಿಸಿದಾಗ ಅದ್ದೂರಿಯಾಗಿ ಸಂಭ್ರಮಿಸುತ್ತಿದ್ದ ಅಭಿಮಾನಿಗಳಿಗೆ ದಿಕ್ಕು ತೋಚದಾಗಿದೆ. ಇದೀಗ ತನ್ನ ನೆಚ್ಚಿನ ನಟ ಜೈಲಲ್ಲಿ 100ದಿನ ಕಳೆಯುವಂತಾಗಿರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಸಿದೆ.

ಅಷ್ಟೇ ಅಲ್ಲದೇ, ದರ್ಶನ್‌ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ʻಬಾಸ್‌ ಹೊರಗಿರಲಿ, ಒಳಗಿರಲಿʼ 100ದಿನ ಫಿಕ್ಸ್‌ ಎಂದು ಪೋಸ್ಟ್‌ ಮಾಡುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

45 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

48 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

55 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago