ಚಿತ್ರದುರ್ಗಾ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟ ದರ್ಶನ್ ಅವರು ಜೈಲಿನೊಳಗೆ ಖೈದಿಗಳೊಂದಿಗೆ ಟೀ ಕುಡಿಯುತ್ತಾ ಮಾತುಕತೆಯಲ್ಲಿ ತೊಡಗಿರುವ ವೀಡಿಯೋ ಸದ್ಯ ಸಖತ್ ವೈರಲ್ ಆಗುತ್ತಿದೆ.
ಈ ವಿಡಿಯೋ ತುಣುಕನ್ನು ನೋಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಕಣ್ಣೀರು ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ದರ್ಶನ್ ಅವರಿಗೆ ತಾವು ತಪ್ಪು ಮಾಡಿರುವ ಭಾವನೆ ಮೂಡಿರುವಂತೆ ಕಾಣುತ್ತಿಲ್ಲ. ರೆಸಾರ್ಟ್ನಲ್ಲಿ ಕುಳಿತಿರುವ ಹಾಗೆ ದರ್ಶನ್ ಕುಳಿತಿರುವುದನ್ನು ನೋಡಿ ನನಗೆ ಗಾಬರಿಯಾಗಿದೆ ಎಂದು ಭಾವುಕರಾದರು.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ನ್ಯಾಯಾಂಗದ ಬಗ್ಗೆ ನಮಗೆ ಇನ್ನು ನಂಬಿಕೆಯಿದೆ. ನಟ ದರ್ಶನ್ಗೆ ಈ ವ್ಯವಸ್ಥೆ ಮಾಡಿದವರಿಗೂ ಶಿಕ್ಷೆ ಕೊಡಿಸಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಮಗನನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದೇವೆ. ಆದರೆ ಆರೋಪಿಗಳು ಜೈಲಿನಲ್ಲಿ ಚೈನಿ ಹೊಡೆಯುತ್ತಿದ್ದಾರೆ. ಇದನ್ನು ನೋಡಿದರೇ ಸೂಕ್ತ ತನಿಖೆಗಾಗಿ ಸಿಬಿಐ ತನಿಖೆಗೆ ವಹಿಸಬೇಕು ಎಂದೆನಿಸುತ್ತಿದೆ. ಇಲ್ಲಿಯವರೆಗೆ ನಡೆದ ರೀತಿಯಲ್ಲಿಯೇ ತನಿಖೆ ಮುಂದುವರಿಯಲಿ ಎಂದು ಅವರು ಮನವಿ ಮಾಡಿದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…