ರಾಜ್ಯ

ದರ್ಶನ್‌ ಹಾಸಿಗೆ, ದಿಂಬಿಗಾಗಿ ಕೋರ್ಟ್‌ಗೆ ಹೋಗ್ತಾರೆ. ಆದರೆ ಖೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಮೇಶ್ವರ್‌ ಸಿಟ್ಟು

ಬೆಂಗಳೂರು: ನಟ ದರ್ಶನ್‌ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಖೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್‌ ಜೈಲಿನ ಅವ್ಯವಸ್ಥೆ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ.

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇ ಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್‌ ಅವರ ಜೊತೆ ನಿನ್ನೆ ಮಾತನಾಡಿದ್ದೇನೆ. ಪದೇ ಪದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು.

ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ದಯಾನಂದ್‌ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್‌ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇನೆ. ವರದಿ ನಮಗೆ ಸಮಾಧಾನ ಆಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

19 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

20 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

23 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

24 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

32 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

39 mins ago