ರಾಜ್ಯ

ದರ್ಶನ್‌ ಹಾಸಿಗೆ, ದಿಂಬಿಗಾಗಿ ಕೋರ್ಟ್‌ಗೆ ಹೋಗ್ತಾರೆ. ಆದರೆ ಖೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಮೇಶ್ವರ್‌ ಸಿಟ್ಟು

ಬೆಂಗಳೂರು: ನಟ ದರ್ಶನ್‌ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಖೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್‌ ಜೈಲಿನ ಅವ್ಯವಸ್ಥೆ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ.

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇ ಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್‌ ಅವರ ಜೊತೆ ನಿನ್ನೆ ಮಾತನಾಡಿದ್ದೇನೆ. ಪದೇ ಪದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು.

ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ದಯಾನಂದ್‌ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್‌ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇನೆ. ವರದಿ ನಮಗೆ ಸಮಾಧಾನ ಆಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

27 mins ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

58 mins ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

1 hour ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

1 hour ago

ಓದುಗರ ಪತ್ರ: ಕೆರೆಗೆ ಘನತ್ಯಾಜ್ಯ ಸುರಿಯುವುದನ್ನು ತಡೆಗಟ್ಟಿ

ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…

1 hour ago

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…

1 hour ago