ರಾಜ್ಯ

ದರ್ಶನ್‌ ಕೊಲೆ ಮಾಡುವಷ್ಟು ಕ್ರೂರಿಯಲ್ಲ: ಶಾಸಕ ಉದಯ್‌ ಸಮರ್ಥನೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಕೃತ್ಯವನ್ನು ಮದ್ದೂರು ಶಾಸಕ ಕೆ.ಎಂ ಉದಯ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಇಂದು(ಜೂ.21) ಬೆಂಗಳೂರಿನಲ್ಲಿ ಮಾತನಾಡಿದ ಉದಯ್‌, ದರ್ಶನ್‌ ಸ್ವಲ್ಪ ಮುಂಗೋಪಿ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದಿದ್ದಾರೆ.

ದರ್ಶನ್‌ ನನಗೆ ಹಲವು ವರ್ಷಗಳಿಂದ ಸ್ನೇಹಿತ. ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಅವರ ಜೊತೆಗಿರುವವರು ಮಾಡಿ, ಇವರ ಮೇಲೆ ಏನಾದ್ರು ಹಾಕಿದ್ರ ಗೊತ್ತಿಲ್ಲ. ಶಿಘ್ರದಲ್ಲೇ ಎಲ್ಲವೂ ತಿಳಿಯಲಿದೆ. ತನಿಖೆಯಲ್ಲಿ ಎಲ್ಲ ಸತ್ಯಸತ್ಯತೆ ಹೊರಬರಲಿದೆ. ನಾನು ಈಗಲೇ ಏನನ್ನೂ ಹೇಳಲು ಬರುವುದಿಲ್ಲ ಎಂದು ಹೇಳಿದ್ದಾರೆ.

ದರ್ಶನ್‌ ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಸ್ವಲ್ಪ ಮುಂಗೋಪದಿಂದ ಮಾತನಾಡುತ್ತಾನೆ ಅಷ್ಟೇ. ಇನ್ನೇನು ಕೆಲವೇ ದಿನಗಳಲ್ಲಿ ಏನು ಎತ್ತ ಹೊರಬಂದು, ರಾಜ್ಯದ ಜನರಿಗೆ ತಿಳಿಯಲಿದೆ ಎಂದಿದ್ದಾರೆ.

ಇನ್ನೂ ತಮ್ಮ ಗನ್‌ಮ್ಯಾನ್‌ ಮೇಲೆ ದರ್ಶನ್‌ ಬೆಂಬಲಿಗರಿಂದ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಗನ್‌ಮ್ಯಾನ್‌ ಮೇಲೆ ಹಲ್ಲೆ ಅನ್ನೋದು ಗೊತ್ತಿಲ್ಲ. ಅದೆಲ್ಲವೂ ಸುಳ್ಳು, ಆ ರೀತಿಯ ಘಟನೆ ನಡೆದಿಲ್ಲ. ನಿಮಗೆ ಇದೆಲ್ಲಾ ಯಾರು ಹೇಳಿದ್ದು. ಆ ಘಟನೆ ನಡೆದೆ ಇಲ್ಲ ಎಂದರು.

ನನಗೆ ಐದಾರು ಜನ ಗನ್‌ಮ್ಯಾನ್‌ ಇದ್ದಾರೆ. ಹಲ್ಲೆ ನಡೆದಿದ್ದರೆ ನನಗೆ ತಿಳಿಯುತ್ತಿಲ್ಲವಾ? ಅಂತಾದ್ದೂ ಯಾವುದು ನಡೆದಿಲ್ಲ. ಇದೆಲ್ಲಾ ಸುಳ್ಳು ಸೃಷ್ಟಿಯಷ್ಟೇ ಎಂದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 mins ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

58 mins ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

1 hour ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

1 hour ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

2 hours ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

3 hours ago