ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೃತ್ಯವನ್ನು ಮದ್ದೂರು ಶಾಸಕ ಕೆ.ಎಂ ಉದಯ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಇಂದು(ಜೂ.21) ಬೆಂಗಳೂರಿನಲ್ಲಿ ಮಾತನಾಡಿದ ಉದಯ್, ದರ್ಶನ್ ಸ್ವಲ್ಪ ಮುಂಗೋಪಿ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದಿದ್ದಾರೆ.
ದರ್ಶನ್ ನನಗೆ ಹಲವು ವರ್ಷಗಳಿಂದ ಸ್ನೇಹಿತ. ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಅವರ ಜೊತೆಗಿರುವವರು ಮಾಡಿ, ಇವರ ಮೇಲೆ ಏನಾದ್ರು ಹಾಕಿದ್ರ ಗೊತ್ತಿಲ್ಲ. ಶಿಘ್ರದಲ್ಲೇ ಎಲ್ಲವೂ ತಿಳಿಯಲಿದೆ. ತನಿಖೆಯಲ್ಲಿ ಎಲ್ಲ ಸತ್ಯಸತ್ಯತೆ ಹೊರಬರಲಿದೆ. ನಾನು ಈಗಲೇ ಏನನ್ನೂ ಹೇಳಲು ಬರುವುದಿಲ್ಲ ಎಂದು ಹೇಳಿದ್ದಾರೆ.
ದರ್ಶನ್ ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಸ್ವಲ್ಪ ಮುಂಗೋಪದಿಂದ ಮಾತನಾಡುತ್ತಾನೆ ಅಷ್ಟೇ. ಇನ್ನೇನು ಕೆಲವೇ ದಿನಗಳಲ್ಲಿ ಏನು ಎತ್ತ ಹೊರಬಂದು, ರಾಜ್ಯದ ಜನರಿಗೆ ತಿಳಿಯಲಿದೆ ಎಂದಿದ್ದಾರೆ.
ಇನ್ನೂ ತಮ್ಮ ಗನ್ಮ್ಯಾನ್ ಮೇಲೆ ದರ್ಶನ್ ಬೆಂಬಲಿಗರಿಂದ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಗನ್ಮ್ಯಾನ್ ಮೇಲೆ ಹಲ್ಲೆ ಅನ್ನೋದು ಗೊತ್ತಿಲ್ಲ. ಅದೆಲ್ಲವೂ ಸುಳ್ಳು, ಆ ರೀತಿಯ ಘಟನೆ ನಡೆದಿಲ್ಲ. ನಿಮಗೆ ಇದೆಲ್ಲಾ ಯಾರು ಹೇಳಿದ್ದು. ಆ ಘಟನೆ ನಡೆದೆ ಇಲ್ಲ ಎಂದರು.
ನನಗೆ ಐದಾರು ಜನ ಗನ್ಮ್ಯಾನ್ ಇದ್ದಾರೆ. ಹಲ್ಲೆ ನಡೆದಿದ್ದರೆ ನನಗೆ ತಿಳಿಯುತ್ತಿಲ್ಲವಾ? ಅಂತಾದ್ದೂ ಯಾವುದು ನಡೆದಿಲ್ಲ. ಇದೆಲ್ಲಾ ಸುಳ್ಳು ಸೃಷ್ಟಿಯಷ್ಟೇ ಎಂದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…