ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೃತ್ಯವನ್ನು ಮದ್ದೂರು ಶಾಸಕ ಕೆ.ಎಂ ಉದಯ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಇಂದು(ಜೂ.21) ಬೆಂಗಳೂರಿನಲ್ಲಿ ಮಾತನಾಡಿದ ಉದಯ್, ದರ್ಶನ್ ಸ್ವಲ್ಪ ಮುಂಗೋಪಿ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದಿದ್ದಾರೆ.
ದರ್ಶನ್ ನನಗೆ ಹಲವು ವರ್ಷಗಳಿಂದ ಸ್ನೇಹಿತ. ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಅವರ ಜೊತೆಗಿರುವವರು ಮಾಡಿ, ಇವರ ಮೇಲೆ ಏನಾದ್ರು ಹಾಕಿದ್ರ ಗೊತ್ತಿಲ್ಲ. ಶಿಘ್ರದಲ್ಲೇ ಎಲ್ಲವೂ ತಿಳಿಯಲಿದೆ. ತನಿಖೆಯಲ್ಲಿ ಎಲ್ಲ ಸತ್ಯಸತ್ಯತೆ ಹೊರಬರಲಿದೆ. ನಾನು ಈಗಲೇ ಏನನ್ನೂ ಹೇಳಲು ಬರುವುದಿಲ್ಲ ಎಂದು ಹೇಳಿದ್ದಾರೆ.
ದರ್ಶನ್ ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಸ್ವಲ್ಪ ಮುಂಗೋಪದಿಂದ ಮಾತನಾಡುತ್ತಾನೆ ಅಷ್ಟೇ. ಇನ್ನೇನು ಕೆಲವೇ ದಿನಗಳಲ್ಲಿ ಏನು ಎತ್ತ ಹೊರಬಂದು, ರಾಜ್ಯದ ಜನರಿಗೆ ತಿಳಿಯಲಿದೆ ಎಂದಿದ್ದಾರೆ.
ಇನ್ನೂ ತಮ್ಮ ಗನ್ಮ್ಯಾನ್ ಮೇಲೆ ದರ್ಶನ್ ಬೆಂಬಲಿಗರಿಂದ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಗನ್ಮ್ಯಾನ್ ಮೇಲೆ ಹಲ್ಲೆ ಅನ್ನೋದು ಗೊತ್ತಿಲ್ಲ. ಅದೆಲ್ಲವೂ ಸುಳ್ಳು, ಆ ರೀತಿಯ ಘಟನೆ ನಡೆದಿಲ್ಲ. ನಿಮಗೆ ಇದೆಲ್ಲಾ ಯಾರು ಹೇಳಿದ್ದು. ಆ ಘಟನೆ ನಡೆದೆ ಇಲ್ಲ ಎಂದರು.
ನನಗೆ ಐದಾರು ಜನ ಗನ್ಮ್ಯಾನ್ ಇದ್ದಾರೆ. ಹಲ್ಲೆ ನಡೆದಿದ್ದರೆ ನನಗೆ ತಿಳಿಯುತ್ತಿಲ್ಲವಾ? ಅಂತಾದ್ದೂ ಯಾವುದು ನಡೆದಿಲ್ಲ. ಇದೆಲ್ಲಾ ಸುಳ್ಳು ಸೃಷ್ಟಿಯಷ್ಟೇ ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…