ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಈ ಮಧ್ಯೆ ನಟ ದರ್ಶನ್ ಜೈಲಿನ ದಿನಚರಿ ಬಗ್ಗೆ ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು.
ನಟ ದರ್ಶನ್ ಜೈಲಿನ ದಿನಚರಿ ನೋಡುವುದಾದರೆ ರಾತ್ರಿ ಬೇಗ ನಿದ್ದೆಗೆ ಜಾರಲಿದ್ದು, ಮರುದಿನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಎದ್ದು ಬಿಸಿನೀರು ಸೇವಿಸುತ್ತಾರಂತೆ. ಬಳಿಕ ಜೈಲಿನ ಸಿಬ್ಬಂದಿ ನೀಡಿದ ಉಪಹಾರ ಸವಿಯುತ್ತಾರೆ. ಆದರೆ ನಟ ದರ್ಶನ್ ಅಷ್ಟಾಗಿ ಯಾರೊಂದಿಗೂ ಬೆರೆಯುತ್ತಿಲ್ಲ ಎನ್ನಲಾಗಿದೆ.
ಇನ್ನು ಜೈಲಿನಲ್ಲಿರುವ ದರ್ಶನ್ಗೆ ತಲೆಕೂದಲು ಮೆಂಟೈನ್ ಮಾಡೋದೇ ದೊಡ್ಡ ಕಷ್ಟ ಆಗಿದೆಯಂತೆ. ವಿಗ್ ಮೆಂಟೈನ್ ಮಾಡಲಾಗದೇ ದರ್ಶನ್ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ಅವರ ಬ್ಯಾರಕ್ನಲ್ಲಿ ದರ್ಶನ್ ಜೊತೆಗೆ ರೇಣುಕಾಸ್ವಾಮಿ ಪ್ರಕರಣದ ಇತರೆ ಆರೋಪಿಗಳು ಇದ್ದು, ಆದರೆ ಅವರೊಂದಿಗೂ ದರ್ಶನ್ ಮಾತನಾಡುತ್ತಿಲ್ಲವಂತೆ. ನಿಮ್ಮಿಂದಲೇ ನನಗೆ ಹೀಗಾಯ್ತು ಎಂಬ ಬೇಸರದಲ್ಲಿ ಅವರೊಂದಿಗೂ ಮಾತನಾಡುತ್ತಿಲ್ಲವಂತೆ. ದರ್ಶನ್ಗೆ ಅಟಾಚ್ ಬಾತ್ ರೂಂ ಇರುವ ಕೊಠಡಿಯನ್ನು ಮಾತ್ರ ನೀಡಿದ್ದು, ಸಾಮಾನ್ಯ ಖೈದಿಯಂತೆ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…
ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…
ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್…
ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್…
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…