ರಾಜ್ಯ

ಜೈಲಿನಲ್ಲಿ ಯಾರೊಂದಿಗೂ ಬೆರೆಯದೆ ಕಥೆ ಪುಸ್ತಕ ಓದುತ್ತಿರುವ ನಟ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಈ ಮಧ್ಯೆ ನಟ ದರ್ಶನ್‌ ಜೈಲಿನ ದಿನಚರಿ ಬಗ್ಗೆ ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು.

ನಟ ದರ್ಶನ್‌ ಜೈಲಿನ ದಿನಚರಿ ನೋಡುವುದಾದರೆ ರಾತ್ರಿ ಬೇಗ ನಿದ್ದೆಗೆ ಜಾರಲಿದ್ದು, ಮರುದಿನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಎದ್ದು ಬಿಸಿನೀರು ಸೇವಿಸುತ್ತಾರಂತೆ. ಬಳಿಕ ಜೈಲಿನ ಸಿಬ್ಬಂದಿ ನೀಡಿದ ಉಪಹಾರ ಸವಿಯುತ್ತಾರೆ. ಆದರೆ ನಟ ದರ್ಶನ್‌ ಅಷ್ಟಾಗಿ ಯಾರೊಂದಿಗೂ ಬೆರೆಯುತ್ತಿಲ್ಲ ಎನ್ನಲಾಗಿದೆ.

ಇನ್ನು ಜೈಲಿನಲ್ಲಿರುವ ದರ್ಶನ್‌ಗೆ ತಲೆಕೂದಲು ಮೆಂಟೈನ್‌ ಮಾಡೋದೇ ದೊಡ್ಡ ಕಷ್ಟ ಆಗಿದೆಯಂತೆ. ವಿಗ್‌ ಮೆಂಟೈನ್‌ ಮಾಡಲಾಗದೇ ದರ್ಶನ್‌ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ದರ್ಶನ್‌ ಅವರ ಬ್ಯಾರಕ್‌ನಲ್ಲಿ ದರ್ಶನ್‌ ಜೊತೆಗೆ ರೇಣುಕಾಸ್ವಾಮಿ ಪ್ರಕರಣದ ಇತರೆ ಆರೋಪಿಗಳು ಇದ್ದು, ಆದರೆ ಅವರೊಂದಿಗೂ ದರ್ಶನ್‌ ಮಾತನಾಡುತ್ತಿಲ್ಲವಂತೆ. ನಿಮ್ಮಿಂದಲೇ ನನಗೆ ಹೀಗಾಯ್ತು ಎಂಬ ಬೇಸರದಲ್ಲಿ ಅವರೊಂದಿಗೂ ಮಾತನಾಡುತ್ತಿಲ್ಲವಂತೆ. ದರ್ಶನ್‌ಗೆ ಅಟಾಚ್‌ ಬಾತ್‌ ರೂಂ ಇರುವ ಕೊಠಡಿಯನ್ನು ಮಾತ್ರ ನೀಡಿದ್ದು, ಸಾಮಾನ್ಯ ಖೈದಿಯಂತೆ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

1 hour ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

1 hour ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

3 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago