ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಈ ಮಧ್ಯೆ ನಟ ದರ್ಶನ್ ಜೈಲಿನ ದಿನಚರಿ ಬಗ್ಗೆ ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು.
ನಟ ದರ್ಶನ್ ಜೈಲಿನ ದಿನಚರಿ ನೋಡುವುದಾದರೆ ರಾತ್ರಿ ಬೇಗ ನಿದ್ದೆಗೆ ಜಾರಲಿದ್ದು, ಮರುದಿನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಎದ್ದು ಬಿಸಿನೀರು ಸೇವಿಸುತ್ತಾರಂತೆ. ಬಳಿಕ ಜೈಲಿನ ಸಿಬ್ಬಂದಿ ನೀಡಿದ ಉಪಹಾರ ಸವಿಯುತ್ತಾರೆ. ಆದರೆ ನಟ ದರ್ಶನ್ ಅಷ್ಟಾಗಿ ಯಾರೊಂದಿಗೂ ಬೆರೆಯುತ್ತಿಲ್ಲ ಎನ್ನಲಾಗಿದೆ.
ಇನ್ನು ಜೈಲಿನಲ್ಲಿರುವ ದರ್ಶನ್ಗೆ ತಲೆಕೂದಲು ಮೆಂಟೈನ್ ಮಾಡೋದೇ ದೊಡ್ಡ ಕಷ್ಟ ಆಗಿದೆಯಂತೆ. ವಿಗ್ ಮೆಂಟೈನ್ ಮಾಡಲಾಗದೇ ದರ್ಶನ್ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ಅವರ ಬ್ಯಾರಕ್ನಲ್ಲಿ ದರ್ಶನ್ ಜೊತೆಗೆ ರೇಣುಕಾಸ್ವಾಮಿ ಪ್ರಕರಣದ ಇತರೆ ಆರೋಪಿಗಳು ಇದ್ದು, ಆದರೆ ಅವರೊಂದಿಗೂ ದರ್ಶನ್ ಮಾತನಾಡುತ್ತಿಲ್ಲವಂತೆ. ನಿಮ್ಮಿಂದಲೇ ನನಗೆ ಹೀಗಾಯ್ತು ಎಂಬ ಬೇಸರದಲ್ಲಿ ಅವರೊಂದಿಗೂ ಮಾತನಾಡುತ್ತಿಲ್ಲವಂತೆ. ದರ್ಶನ್ಗೆ ಅಟಾಚ್ ಬಾತ್ ರೂಂ ಇರುವ ಕೊಠಡಿಯನ್ನು ಮಾತ್ರ ನೀಡಿದ್ದು, ಸಾಮಾನ್ಯ ಖೈದಿಯಂತೆ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…