ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಈ ಮಧ್ಯೆ ನಟ ದರ್ಶನ್ ಜೈಲಿನ ದಿನಚರಿ ಬಗ್ಗೆ ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು.
ನಟ ದರ್ಶನ್ ಜೈಲಿನ ದಿನಚರಿ ನೋಡುವುದಾದರೆ ರಾತ್ರಿ ಬೇಗ ನಿದ್ದೆಗೆ ಜಾರಲಿದ್ದು, ಮರುದಿನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಎದ್ದು ಬಿಸಿನೀರು ಸೇವಿಸುತ್ತಾರಂತೆ. ಬಳಿಕ ಜೈಲಿನ ಸಿಬ್ಬಂದಿ ನೀಡಿದ ಉಪಹಾರ ಸವಿಯುತ್ತಾರೆ. ಆದರೆ ನಟ ದರ್ಶನ್ ಅಷ್ಟಾಗಿ ಯಾರೊಂದಿಗೂ ಬೆರೆಯುತ್ತಿಲ್ಲ ಎನ್ನಲಾಗಿದೆ.
ಇನ್ನು ಜೈಲಿನಲ್ಲಿರುವ ದರ್ಶನ್ಗೆ ತಲೆಕೂದಲು ಮೆಂಟೈನ್ ಮಾಡೋದೇ ದೊಡ್ಡ ಕಷ್ಟ ಆಗಿದೆಯಂತೆ. ವಿಗ್ ಮೆಂಟೈನ್ ಮಾಡಲಾಗದೇ ದರ್ಶನ್ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ಅವರ ಬ್ಯಾರಕ್ನಲ್ಲಿ ದರ್ಶನ್ ಜೊತೆಗೆ ರೇಣುಕಾಸ್ವಾಮಿ ಪ್ರಕರಣದ ಇತರೆ ಆರೋಪಿಗಳು ಇದ್ದು, ಆದರೆ ಅವರೊಂದಿಗೂ ದರ್ಶನ್ ಮಾತನಾಡುತ್ತಿಲ್ಲವಂತೆ. ನಿಮ್ಮಿಂದಲೇ ನನಗೆ ಹೀಗಾಯ್ತು ಎಂಬ ಬೇಸರದಲ್ಲಿ ಅವರೊಂದಿಗೂ ಮಾತನಾಡುತ್ತಿಲ್ಲವಂತೆ. ದರ್ಶನ್ಗೆ ಅಟಾಚ್ ಬಾತ್ ರೂಂ ಇರುವ ಕೊಠಡಿಯನ್ನು ಮಾತ್ರ ನೀಡಿದ್ದು, ಸಾಮಾನ್ಯ ಖೈದಿಯಂತೆ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…