ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಈ ಮಧ್ಯೆ ನಟ ದರ್ಶನ್ ಜೈಲಿನ ದಿನಚರಿ ಬಗ್ಗೆ ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು.
ನಟ ದರ್ಶನ್ ಜೈಲಿನ ದಿನಚರಿ ನೋಡುವುದಾದರೆ ರಾತ್ರಿ ಬೇಗ ನಿದ್ದೆಗೆ ಜಾರಲಿದ್ದು, ಮರುದಿನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಎದ್ದು ಬಿಸಿನೀರು ಸೇವಿಸುತ್ತಾರಂತೆ. ಬಳಿಕ ಜೈಲಿನ ಸಿಬ್ಬಂದಿ ನೀಡಿದ ಉಪಹಾರ ಸವಿಯುತ್ತಾರೆ. ಆದರೆ ನಟ ದರ್ಶನ್ ಅಷ್ಟಾಗಿ ಯಾರೊಂದಿಗೂ ಬೆರೆಯುತ್ತಿಲ್ಲ ಎನ್ನಲಾಗಿದೆ.
ಇನ್ನು ಜೈಲಿನಲ್ಲಿರುವ ದರ್ಶನ್ಗೆ ತಲೆಕೂದಲು ಮೆಂಟೈನ್ ಮಾಡೋದೇ ದೊಡ್ಡ ಕಷ್ಟ ಆಗಿದೆಯಂತೆ. ವಿಗ್ ಮೆಂಟೈನ್ ಮಾಡಲಾಗದೇ ದರ್ಶನ್ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ಅವರ ಬ್ಯಾರಕ್ನಲ್ಲಿ ದರ್ಶನ್ ಜೊತೆಗೆ ರೇಣುಕಾಸ್ವಾಮಿ ಪ್ರಕರಣದ ಇತರೆ ಆರೋಪಿಗಳು ಇದ್ದು, ಆದರೆ ಅವರೊಂದಿಗೂ ದರ್ಶನ್ ಮಾತನಾಡುತ್ತಿಲ್ಲವಂತೆ. ನಿಮ್ಮಿಂದಲೇ ನನಗೆ ಹೀಗಾಯ್ತು ಎಂಬ ಬೇಸರದಲ್ಲಿ ಅವರೊಂದಿಗೂ ಮಾತನಾಡುತ್ತಿಲ್ಲವಂತೆ. ದರ್ಶನ್ಗೆ ಅಟಾಚ್ ಬಾತ್ ರೂಂ ಇರುವ ಕೊಠಡಿಯನ್ನು ಮಾತ್ರ ನೀಡಿದ್ದು, ಸಾಮಾನ್ಯ ಖೈದಿಯಂತೆ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…