ರಾಜ್ಯ

ಜೈಲಿನಲ್ಲಿ ಯಾರೊಂದಿಗೂ ಬೆರೆಯದೆ ಕಥೆ ಪುಸ್ತಕ ಓದುತ್ತಿರುವ ನಟ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಈ ಮಧ್ಯೆ ನಟ ದರ್ಶನ್‌ ಜೈಲಿನ ದಿನಚರಿ ಬಗ್ಗೆ ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು.

ನಟ ದರ್ಶನ್‌ ಜೈಲಿನ ದಿನಚರಿ ನೋಡುವುದಾದರೆ ರಾತ್ರಿ ಬೇಗ ನಿದ್ದೆಗೆ ಜಾರಲಿದ್ದು, ಮರುದಿನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಎದ್ದು ಬಿಸಿನೀರು ಸೇವಿಸುತ್ತಾರಂತೆ. ಬಳಿಕ ಜೈಲಿನ ಸಿಬ್ಬಂದಿ ನೀಡಿದ ಉಪಹಾರ ಸವಿಯುತ್ತಾರೆ. ಆದರೆ ನಟ ದರ್ಶನ್‌ ಅಷ್ಟಾಗಿ ಯಾರೊಂದಿಗೂ ಬೆರೆಯುತ್ತಿಲ್ಲ ಎನ್ನಲಾಗಿದೆ.

ಇನ್ನು ಜೈಲಿನಲ್ಲಿರುವ ದರ್ಶನ್‌ಗೆ ತಲೆಕೂದಲು ಮೆಂಟೈನ್‌ ಮಾಡೋದೇ ದೊಡ್ಡ ಕಷ್ಟ ಆಗಿದೆಯಂತೆ. ವಿಗ್‌ ಮೆಂಟೈನ್‌ ಮಾಡಲಾಗದೇ ದರ್ಶನ್‌ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ದರ್ಶನ್‌ ಅವರ ಬ್ಯಾರಕ್‌ನಲ್ಲಿ ದರ್ಶನ್‌ ಜೊತೆಗೆ ರೇಣುಕಾಸ್ವಾಮಿ ಪ್ರಕರಣದ ಇತರೆ ಆರೋಪಿಗಳು ಇದ್ದು, ಆದರೆ ಅವರೊಂದಿಗೂ ದರ್ಶನ್‌ ಮಾತನಾಡುತ್ತಿಲ್ಲವಂತೆ. ನಿಮ್ಮಿಂದಲೇ ನನಗೆ ಹೀಗಾಯ್ತು ಎಂಬ ಬೇಸರದಲ್ಲಿ ಅವರೊಂದಿಗೂ ಮಾತನಾಡುತ್ತಿಲ್ಲವಂತೆ. ದರ್ಶನ್‌ಗೆ ಅಟಾಚ್‌ ಬಾತ್‌ ರೂಂ ಇರುವ ಕೊಠಡಿಯನ್ನು ಮಾತ್ರ ನೀಡಿದ್ದು, ಸಾಮಾನ್ಯ ಖೈದಿಯಂತೆ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago