ರಾಜ್ಯ

ರೇಣುಕಾಸ್ವಾಮಿ ಹತ್ಯೆ ಕೇಸ್‌: ಜಪ್ತಿ ಮಾಡಿದ್ದ ಹಣ ಹಿಂತಿರುಗಿಸುವಂತೆ ಸೆಷನ್ಸ್ ಕೋರ್ಟ್‌ಗೆ ದರ್ಶನ್‌ ಅರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ದರ್ಶನ್‌ ನಿವಾಸದಲ್ಲಿ 40 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದರು. ಆದರೆ ಇದೀಗ ಆ ಹಣವನ್ನು ಹಿಂತಿರುಗಿಸುವಂತೆ ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಜನವರಿ.11) ರಂದು ಸೆಷನ್ಸ್‌ ಕೋರ್ಟ್‌ಗೆ ಆರೋಪಿ ದರ್ಶನ್‌ ಹಣವನ್ನು ವಾಪಾಸ್‌ ನೀಡುವಂತೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಅವರು ಜಪ್ತಿ ಮಾಡಿದ್ದ 40 ಲಕ್ಷ ರೂ. ಹಣಕ್ಕೂ, ರೇಣುಕಾಸ್ವಾಮಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಆ ಹಣ ನನ್ನ ಸ್ವಂತ ದುಡಿಮೆಯ ಹಣವಾಗಿದೆ. ಹೀಗಾಗಿ ಆ ಹಣವನ್ನು ಮನೆಯಲ್ಲಿಯೇ ಇರಿಸಿದ್ದೆ ಎಂದು ನಮೂದಿಸಿದ್ದಾರೆ.

ಇನ್ನೂ ನನ್ನ ಬಳಿ ಈಗ ನಿತ್ಯ ಖರ್ಚಿಗೆ ಹಾಗೂ ಆರೋಗ್ಯ ತುರ್ತಿಗಾಗಿ ಹಣದ ಅವಶ್ಯಕತೆ ಇದೆ. ಈ ಕಾರಣಕ್ಕೆ ಪೊಲೀಸರು ಜಪ್ತಿ ಮಾಡಿದ್ದ ಹಣವನ್ನು ವಾಪಾಸ್‌ ನೀಡುವಂತೆ ಮಾಡಬೇಕೆಂಬ ಮನವಿಯನ್ನು ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

40 ಲಕ್ಷ ರೂ. ಹಣದ ತನಿಖೆಗಾಗಿ ಐಟಿ ಪ್ರತ್ಯೇಕ ಅರ್ಜಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಇರುವ ದರ್ಶನ್‌ ಜಪ್ತಿ ಮಾಡಿದ್ದ ಹಣವನ್ನು ವಾಪಾಸ್‌ ನೀಡುವಂತೆ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಐಟಿ ತನಿಖಾ ತಂಡವೂ ಸಹ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

ಅರ್ಜಿಯಲ್ಲಿ ಏನಿದೆ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಮನೆಯಲ್ಲಿ ಜಪ್ತಿ ಮಾಡಿದ್ದ 40 ಲಕ್ಷ ರೂ. ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇದೆ. ಏಕೆಂದರೆ ಈ ಹಣದ ಮೂಲ ಮತ್ತು ಅಗತ್ಯತೆಯ ಬಗ್ಗೆ ತನಿಖೆ ನಡೆಸಬೇಕು. ಹೀಗಾಗಿ ತನಿಖೆ ಅವಕಾಶ ನೀಡಬೇಕು ಎಂದು ಕೋರಿ ಐಟಿ ತನಿಖಾ ಸಂಸ್ಥೆಯೂ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅರ್ಚನ ಎಸ್‌ ಎಸ್

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

39 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

59 mins ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

3 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

3 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

16 hours ago