ರಾಜ್ಯ

ರೇಣುಕಾಸ್ವಾಮಿ ಹತ್ಯೆ ಕೇಸ್‌: ಜಪ್ತಿ ಮಾಡಿದ್ದ ಹಣ ಹಿಂತಿರುಗಿಸುವಂತೆ ಸೆಷನ್ಸ್ ಕೋರ್ಟ್‌ಗೆ ದರ್ಶನ್‌ ಅರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ದರ್ಶನ್‌ ನಿವಾಸದಲ್ಲಿ 40 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದರು. ಆದರೆ ಇದೀಗ ಆ ಹಣವನ್ನು ಹಿಂತಿರುಗಿಸುವಂತೆ ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಜನವರಿ.11) ರಂದು ಸೆಷನ್ಸ್‌ ಕೋರ್ಟ್‌ಗೆ ಆರೋಪಿ ದರ್ಶನ್‌ ಹಣವನ್ನು ವಾಪಾಸ್‌ ನೀಡುವಂತೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಅವರು ಜಪ್ತಿ ಮಾಡಿದ್ದ 40 ಲಕ್ಷ ರೂ. ಹಣಕ್ಕೂ, ರೇಣುಕಾಸ್ವಾಮಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಆ ಹಣ ನನ್ನ ಸ್ವಂತ ದುಡಿಮೆಯ ಹಣವಾಗಿದೆ. ಹೀಗಾಗಿ ಆ ಹಣವನ್ನು ಮನೆಯಲ್ಲಿಯೇ ಇರಿಸಿದ್ದೆ ಎಂದು ನಮೂದಿಸಿದ್ದಾರೆ.

ಇನ್ನೂ ನನ್ನ ಬಳಿ ಈಗ ನಿತ್ಯ ಖರ್ಚಿಗೆ ಹಾಗೂ ಆರೋಗ್ಯ ತುರ್ತಿಗಾಗಿ ಹಣದ ಅವಶ್ಯಕತೆ ಇದೆ. ಈ ಕಾರಣಕ್ಕೆ ಪೊಲೀಸರು ಜಪ್ತಿ ಮಾಡಿದ್ದ ಹಣವನ್ನು ವಾಪಾಸ್‌ ನೀಡುವಂತೆ ಮಾಡಬೇಕೆಂಬ ಮನವಿಯನ್ನು ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

40 ಲಕ್ಷ ರೂ. ಹಣದ ತನಿಖೆಗಾಗಿ ಐಟಿ ಪ್ರತ್ಯೇಕ ಅರ್ಜಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಇರುವ ದರ್ಶನ್‌ ಜಪ್ತಿ ಮಾಡಿದ್ದ ಹಣವನ್ನು ವಾಪಾಸ್‌ ನೀಡುವಂತೆ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಐಟಿ ತನಿಖಾ ತಂಡವೂ ಸಹ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

ಅರ್ಜಿಯಲ್ಲಿ ಏನಿದೆ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಮನೆಯಲ್ಲಿ ಜಪ್ತಿ ಮಾಡಿದ್ದ 40 ಲಕ್ಷ ರೂ. ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇದೆ. ಏಕೆಂದರೆ ಈ ಹಣದ ಮೂಲ ಮತ್ತು ಅಗತ್ಯತೆಯ ಬಗ್ಗೆ ತನಿಖೆ ನಡೆಸಬೇಕು. ಹೀಗಾಗಿ ತನಿಖೆ ಅವಕಾಶ ನೀಡಬೇಕು ಎಂದು ಕೋರಿ ಐಟಿ ತನಿಖಾ ಸಂಸ್ಥೆಯೂ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅರ್ಚನ ಎಸ್‌ ಎಸ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

8 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

9 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

9 hours ago