ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ ದೀಪಾವಳಿಯ ಉಡುಗೊರೆ ಸಿಕ್ಕಿದೆ. ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನನ್ನು ಹೈಕೋರ್ಟ್ ಮಂಜೂರು ಮಾಡಿದೆ. ಹೀಗಾಗಿ, 140ದಿನಗಳ ಬಳಿಕ ದರ್ಶನ್ ಬಿಡುಗಡೆಯಾಗುತ್ತಿದ್ದಾರೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹೈಕೋರ್ಟ್ಗೆ ಅರ್ಜಿ ಹಾಕಿ, ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು.
ದರ್ಶನ್ಗೆ ತೀವ್ರ ಬೆನ್ನು ಹುರಿಯಿದ್ದ, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ವಾದ ಪತ್ರಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು ಎಂದು ಉಲ್ಲೇಖಿಸಿ ಷರತ್ತುಬದ್ಧ ಮಧ್ಯಂತ್ರ ಜಾಮೀನು ನೀಡಿದೆ. ಆದರೆ, 6 ವಾರಗಳ ಮಧ್ಯಂತರ ಜಾಮೀನು ಇದಾಗಿದೆ. ಎಸ್ಪಿಪಿ ಮನವಿ ಮನವಿ ಮೇರೆಗೆ ದರ್ಶನ್ ಪಾಸ್ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ.
ನ್ಯಾಯಾಲಯದ ಷರತ್ತು ಪೂರ್ಣಗೊಳಿಸಿದ ಬಳಿಕ ದರ್ಶನ್ ಇಂದು ಸಂಜೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಮದ್ಯಂತರ ಜಾಮೀನಿಂದ ದರ್ಶನ್ ಹಾಗೂ ದಾಸನ ಅಭಿಮಾನಿಗಳಿಗೆ ಇಂದಿನಿಂದಲೇ ದೀಪಾವಳಿ ಆರಂಭವಾಗಿದೆ.
• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ…
• ಚಿತ್ರ ಮತ್ತು ಬರಹ : ಸಿರಿ ಮೈಸೂರು ಮೈಸೂರಿನಿಂದ ಹೊರಗಿರುವ ಮೈಸೂರಿಗರು ಈಗಲೂ ಮೈಸೂರಿನಲ್ಲಿರುವ ಮೈಸೂರಿಗರಿಗೆ ಈ ಪಶ್ನೆ…
• ಶೇಷಾದ್ರಿ ಗಂಜೂರು ಅಮೆರಿಕದ ಫ್ಲಾರಿಡಾ ರಾಜ್ಯದ ಸಣ್ಣ ಊರೊಂದರ ಹೈಸ್ಕೂಲಿನಲ್ಲಿ, 21 ವರ್ಷಗಳ ಹಿಂದೆ, ಇಬ್ಬರು ಬಾಲಕಿಯರು ಹೊಡೆದಾಡಲು…
ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…
ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…