ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ ದೀಪಾವಳಿಯ ಉಡುಗೊರೆ ಸಿಕ್ಕಿದೆ. ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನನ್ನು ಹೈಕೋರ್ಟ್ ಮಂಜೂರು ಮಾಡಿದೆ. ಹೀಗಾಗಿ, 140ದಿನಗಳ ಬಳಿಕ ದರ್ಶನ್ ಬಿಡುಗಡೆಯಾಗುತ್ತಿದ್ದಾರೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹೈಕೋರ್ಟ್ಗೆ ಅರ್ಜಿ ಹಾಕಿ, ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು.
ದರ್ಶನ್ಗೆ ತೀವ್ರ ಬೆನ್ನು ಹುರಿಯಿದ್ದ, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ವಾದ ಪತ್ರಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು ಎಂದು ಉಲ್ಲೇಖಿಸಿ ಷರತ್ತುಬದ್ಧ ಮಧ್ಯಂತ್ರ ಜಾಮೀನು ನೀಡಿದೆ. ಆದರೆ, 6 ವಾರಗಳ ಮಧ್ಯಂತರ ಜಾಮೀನು ಇದಾಗಿದೆ. ಎಸ್ಪಿಪಿ ಮನವಿ ಮನವಿ ಮೇರೆಗೆ ದರ್ಶನ್ ಪಾಸ್ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ.
ನ್ಯಾಯಾಲಯದ ಷರತ್ತು ಪೂರ್ಣಗೊಳಿಸಿದ ಬಳಿಕ ದರ್ಶನ್ ಇಂದು ಸಂಜೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಮದ್ಯಂತರ ಜಾಮೀನಿಂದ ದರ್ಶನ್ ಹಾಗೂ ದಾಸನ ಅಭಿಮಾನಿಗಳಿಗೆ ಇಂದಿನಿಂದಲೇ ದೀಪಾವಳಿ ಆರಂಭವಾಗಿದೆ.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…