ರಾಜ್ಯ

ದರ್ಶನ್‌ ರಿಲೀಸ್:‌ ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ದೀಪಾವಳಿಯ ಉಡುಗೊರೆ ಸಿಕ್ಕಿದೆ. ದರ್ಶನ್‌ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನನ್ನು ಹೈಕೋರ್ಟ್‌ ಮಂಜೂರು ಮಾಡಿದೆ. ಹೀಗಾಗಿ, 140ದಿನಗಳ ಬಳಿಕ ದರ್ಶನ್‌ ಬಿಡುಗಡೆಯಾಗುತ್ತಿದ್ದಾರೆ.

ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್‌ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್‌ ಪರ ವಕೀಲ ಸಿ.ವಿ ನಾಗೇಶ್‌ ಹೈಕೋರ್ಟ್‌ಗೆ ಅರ್ಜಿ ಹಾಕಿ, ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು.

ದರ್ಶನ್‌ಗೆ ತೀವ್ರ ಬೆನ್ನು ಹುರಿಯಿದ್ದ, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್‌ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ವಾದ ಪತ್ರಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್‌ ಅವರು, ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು ಎಂದು ಉಲ್ಲೇಖಿಸಿ ಷರತ್ತುಬದ್ಧ ಮಧ್ಯಂತ್ರ ಜಾಮೀನು ನೀಡಿದೆ. ಆದರೆ, 6 ವಾರಗಳ ಮಧ್ಯಂತರ ಜಾಮೀನು ಇದಾಗಿದೆ. ಎಸ್‌ಪಿಪಿ ಮನವಿ ಮನವಿ ಮೇರೆಗೆ ದರ್ಶನ್‌ ಪಾಸ್‌ಪೋರ್ಟ್‌ ವಶಕ್ಕೆ ನೀಡುವಂತೆ ಸೂಚಿಸಿದೆ.

ನ್ಯಾಯಾಲಯದ ಷರತ್ತು ಪೂರ್ಣಗೊಳಿಸಿದ ಬಳಿಕ ದರ್ಶನ್‌ ಇಂದು ಸಂಜೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಮದ್ಯಂತರ ಜಾಮೀನಿಂದ ದರ್ಶನ್ ಹಾಗೂ ದಾಸನ ಅಭಿಮಾನಿಗಳಿಗೆ ಇಂದಿನಿಂದಲೇ ದೀಪಾವಳಿ ಆರಂಭವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

10 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

11 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

11 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

11 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

11 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

11 hours ago