ರಾಜ್ಯ

ಜೈಲಿನಲ್ಲಿ ದರ್ಶನ್ ಮೌನ; ದರ್ಶನ್ ಭೇಟಿ ಬಳಿಕ ವಿನೋದ್ ಪ್ರಭಾಕರ್‌ ಹೇಳಿದ್ದೇನೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ದರ್ಶನ್‌ರನ್ನು ನೋಡಲು ಅವರ ಆಪ್ತ ಬಳಗಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದು, ಅಂತೆಯೇ ಅವರ ಆಪ್ತ ಸ್ನೇಹಿತ ವಿನೋಧ ಪ್ರಭಾಕರ್‌ ಅವರು ದರ್ಶನ್‌ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿನೋದ್‌ ಪ್ರಭಾಕರ್‌, ಮೊದಲನೆಯದಾಗಿ ಮೃತ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಬೇಕು. ಅವರ ಕುಟುಂಬಕ್ಕೆ ಭಗವಂತ ಧೈರ್ಯ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ದರ್ಶನ್‌ ಅವರನ್ನು ಜೈಲಿನ ನಿಯಾಮವಳಿ ಪ್ರಕಾರವೇ ಭೇಟಿ ಮಾಡಿದೆ. ಕೇವಲ ಎರಡು ಸೆಕೆಂಡ್‌ ಮಾತ್ರ ದರ್ಶನ್‌ ಸಾರ್‌ ಮಾತಾಡೋಕೆ ಸಿಕ್ಕಿದ್ದು. ಅವರ ಮುಖದಲ್ಲಿ ಮೌನ ಇತ್ತು. ಏನನ್ನೂ ಮಾತಡಲಿಲ್ಲ. ನೋಡಿದ ತಕ್ಷಣ ನಾನು ಬಾಸ್‌ ಅಂತ ಕರೆದೆ ಅದಕ್ಕೆ ಅವರು ಟೈಗರ್‌ ಅಂದು ಶೇಕ್‌ ಹ್ಯಾಂಡ್‌ ಮಾಡಿದರು ಅಷ್ಟೆ ಎಂದು ವಿನೋದ್‌ ಪ್ರಭಾಕರ್‌ ಹೇಳಿದ್ದಾರೆ.

ನಾನು ದರ್ಶನ್‌ ಭೇಟಿಯಾಗಿ 4 ತಿಂಗಳು ಕಳೆದಿವೆ. ಅವರ ಹುಟ್ಟುಹಬ್ಬದ ನಂತರ ಒಂದು ಪಾರ್ಟಿಯಲ್ಲಿ ಸಿಕ್ಕಿದ್ವಿ ಅಷ್ಟೇ. ನಾನು ಟಿವಿಯಲ್ಲಿ ನೋಡಿಯೇ ಎಲ್ಲವನ್ನೂ ತಿಳಿದಿದ್ದು, ನಿಮಗೆಷ್ಟು ಗೊತ್ತಿದ್ದಿಯೋ ನನಗೂ ಅಷ್ಟೆ ಗೊತ್ತಿರೋದು ಎಂದರು.

ಇಷ್ಟು ದಿನ ದರ್ಶನ್‌ ಅವರನ್ನು ನೋಡಲು ಬಂದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವ್ರು ಟೀಕೆ ಮಾಡಿದ್ರು, ಈ ಬಗ್ಗೆಯೂ ಮಾತನಾಡಿದ ಅವರು, ಅನ್ನಪೂರ್ಣೇಶ್ವರಿ ಠಾಣೆ ಬಳಿ ಬೇಟಿಯಾಗಲೂ ತೆರಳಿದ್ದೆ, ಆದರೆ ಅದು ಸಾಧ್ಯವಾಗಲಿಲ್ಲ. ಆಗಾಗಿ ಇಂದು ಇಲ್ಲಿ ಬಂದು ಭೇಟಿಯಾಗಿದ್ದೇನೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

5 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

5 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

6 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

7 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

7 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

9 hours ago