ರಾಜ್ಯ

ಜೈಲಿನಲ್ಲಿ ದರ್ಶನ್ ಮೌನ; ದರ್ಶನ್ ಭೇಟಿ ಬಳಿಕ ವಿನೋದ್ ಪ್ರಭಾಕರ್‌ ಹೇಳಿದ್ದೇನೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ದರ್ಶನ್‌ರನ್ನು ನೋಡಲು ಅವರ ಆಪ್ತ ಬಳಗಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದು, ಅಂತೆಯೇ ಅವರ ಆಪ್ತ ಸ್ನೇಹಿತ ವಿನೋಧ ಪ್ರಭಾಕರ್‌ ಅವರು ದರ್ಶನ್‌ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿನೋದ್‌ ಪ್ರಭಾಕರ್‌, ಮೊದಲನೆಯದಾಗಿ ಮೃತ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಬೇಕು. ಅವರ ಕುಟುಂಬಕ್ಕೆ ಭಗವಂತ ಧೈರ್ಯ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ದರ್ಶನ್‌ ಅವರನ್ನು ಜೈಲಿನ ನಿಯಾಮವಳಿ ಪ್ರಕಾರವೇ ಭೇಟಿ ಮಾಡಿದೆ. ಕೇವಲ ಎರಡು ಸೆಕೆಂಡ್‌ ಮಾತ್ರ ದರ್ಶನ್‌ ಸಾರ್‌ ಮಾತಾಡೋಕೆ ಸಿಕ್ಕಿದ್ದು. ಅವರ ಮುಖದಲ್ಲಿ ಮೌನ ಇತ್ತು. ಏನನ್ನೂ ಮಾತಡಲಿಲ್ಲ. ನೋಡಿದ ತಕ್ಷಣ ನಾನು ಬಾಸ್‌ ಅಂತ ಕರೆದೆ ಅದಕ್ಕೆ ಅವರು ಟೈಗರ್‌ ಅಂದು ಶೇಕ್‌ ಹ್ಯಾಂಡ್‌ ಮಾಡಿದರು ಅಷ್ಟೆ ಎಂದು ವಿನೋದ್‌ ಪ್ರಭಾಕರ್‌ ಹೇಳಿದ್ದಾರೆ.

ನಾನು ದರ್ಶನ್‌ ಭೇಟಿಯಾಗಿ 4 ತಿಂಗಳು ಕಳೆದಿವೆ. ಅವರ ಹುಟ್ಟುಹಬ್ಬದ ನಂತರ ಒಂದು ಪಾರ್ಟಿಯಲ್ಲಿ ಸಿಕ್ಕಿದ್ವಿ ಅಷ್ಟೇ. ನಾನು ಟಿವಿಯಲ್ಲಿ ನೋಡಿಯೇ ಎಲ್ಲವನ್ನೂ ತಿಳಿದಿದ್ದು, ನಿಮಗೆಷ್ಟು ಗೊತ್ತಿದ್ದಿಯೋ ನನಗೂ ಅಷ್ಟೆ ಗೊತ್ತಿರೋದು ಎಂದರು.

ಇಷ್ಟು ದಿನ ದರ್ಶನ್‌ ಅವರನ್ನು ನೋಡಲು ಬಂದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವ್ರು ಟೀಕೆ ಮಾಡಿದ್ರು, ಈ ಬಗ್ಗೆಯೂ ಮಾತನಾಡಿದ ಅವರು, ಅನ್ನಪೂರ್ಣೇಶ್ವರಿ ಠಾಣೆ ಬಳಿ ಬೇಟಿಯಾಗಲೂ ತೆರಳಿದ್ದೆ, ಆದರೆ ಅದು ಸಾಧ್ಯವಾಗಲಿಲ್ಲ. ಆಗಾಗಿ ಇಂದು ಇಲ್ಲಿ ಬಂದು ಭೇಟಿಯಾಗಿದ್ದೇನೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

5 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

5 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

5 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

8 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

8 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

8 hours ago