ರಾಜ್ಯ

ಜೈಲಿನಲ್ಲಿ ದರ್ಶನ್ ಮೌನ; ದರ್ಶನ್ ಭೇಟಿ ಬಳಿಕ ವಿನೋದ್ ಪ್ರಭಾಕರ್‌ ಹೇಳಿದ್ದೇನೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ದರ್ಶನ್‌ರನ್ನು ನೋಡಲು ಅವರ ಆಪ್ತ ಬಳಗಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದು, ಅಂತೆಯೇ ಅವರ ಆಪ್ತ ಸ್ನೇಹಿತ ವಿನೋಧ ಪ್ರಭಾಕರ್‌ ಅವರು ದರ್ಶನ್‌ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿನೋದ್‌ ಪ್ರಭಾಕರ್‌, ಮೊದಲನೆಯದಾಗಿ ಮೃತ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಬೇಕು. ಅವರ ಕುಟುಂಬಕ್ಕೆ ಭಗವಂತ ಧೈರ್ಯ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ದರ್ಶನ್‌ ಅವರನ್ನು ಜೈಲಿನ ನಿಯಾಮವಳಿ ಪ್ರಕಾರವೇ ಭೇಟಿ ಮಾಡಿದೆ. ಕೇವಲ ಎರಡು ಸೆಕೆಂಡ್‌ ಮಾತ್ರ ದರ್ಶನ್‌ ಸಾರ್‌ ಮಾತಾಡೋಕೆ ಸಿಕ್ಕಿದ್ದು. ಅವರ ಮುಖದಲ್ಲಿ ಮೌನ ಇತ್ತು. ಏನನ್ನೂ ಮಾತಡಲಿಲ್ಲ. ನೋಡಿದ ತಕ್ಷಣ ನಾನು ಬಾಸ್‌ ಅಂತ ಕರೆದೆ ಅದಕ್ಕೆ ಅವರು ಟೈಗರ್‌ ಅಂದು ಶೇಕ್‌ ಹ್ಯಾಂಡ್‌ ಮಾಡಿದರು ಅಷ್ಟೆ ಎಂದು ವಿನೋದ್‌ ಪ್ರಭಾಕರ್‌ ಹೇಳಿದ್ದಾರೆ.

ನಾನು ದರ್ಶನ್‌ ಭೇಟಿಯಾಗಿ 4 ತಿಂಗಳು ಕಳೆದಿವೆ. ಅವರ ಹುಟ್ಟುಹಬ್ಬದ ನಂತರ ಒಂದು ಪಾರ್ಟಿಯಲ್ಲಿ ಸಿಕ್ಕಿದ್ವಿ ಅಷ್ಟೇ. ನಾನು ಟಿವಿಯಲ್ಲಿ ನೋಡಿಯೇ ಎಲ್ಲವನ್ನೂ ತಿಳಿದಿದ್ದು, ನಿಮಗೆಷ್ಟು ಗೊತ್ತಿದ್ದಿಯೋ ನನಗೂ ಅಷ್ಟೆ ಗೊತ್ತಿರೋದು ಎಂದರು.

ಇಷ್ಟು ದಿನ ದರ್ಶನ್‌ ಅವರನ್ನು ನೋಡಲು ಬಂದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವ್ರು ಟೀಕೆ ಮಾಡಿದ್ರು, ಈ ಬಗ್ಗೆಯೂ ಮಾತನಾಡಿದ ಅವರು, ಅನ್ನಪೂರ್ಣೇಶ್ವರಿ ಠಾಣೆ ಬಳಿ ಬೇಟಿಯಾಗಲೂ ತೆರಳಿದ್ದೆ, ಆದರೆ ಅದು ಸಾಧ್ಯವಾಗಲಿಲ್ಲ. ಆಗಾಗಿ ಇಂದು ಇಲ್ಲಿ ಬಂದು ಭೇಟಿಯಾಗಿದ್ದೇನೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago