ರಾಜ್ಯ

ಜೈಲಿನಲ್ಲಿ ದರ್ಶನ್ ಮೌನ; ದರ್ಶನ್ ಭೇಟಿ ಬಳಿಕ ವಿನೋದ್ ಪ್ರಭಾಕರ್‌ ಹೇಳಿದ್ದೇನೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ದರ್ಶನ್‌ರನ್ನು ನೋಡಲು ಅವರ ಆಪ್ತ ಬಳಗಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದು, ಅಂತೆಯೇ ಅವರ ಆಪ್ತ ಸ್ನೇಹಿತ ವಿನೋಧ ಪ್ರಭಾಕರ್‌ ಅವರು ದರ್ಶನ್‌ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿನೋದ್‌ ಪ್ರಭಾಕರ್‌, ಮೊದಲನೆಯದಾಗಿ ಮೃತ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಬೇಕು. ಅವರ ಕುಟುಂಬಕ್ಕೆ ಭಗವಂತ ಧೈರ್ಯ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ದರ್ಶನ್‌ ಅವರನ್ನು ಜೈಲಿನ ನಿಯಾಮವಳಿ ಪ್ರಕಾರವೇ ಭೇಟಿ ಮಾಡಿದೆ. ಕೇವಲ ಎರಡು ಸೆಕೆಂಡ್‌ ಮಾತ್ರ ದರ್ಶನ್‌ ಸಾರ್‌ ಮಾತಾಡೋಕೆ ಸಿಕ್ಕಿದ್ದು. ಅವರ ಮುಖದಲ್ಲಿ ಮೌನ ಇತ್ತು. ಏನನ್ನೂ ಮಾತಡಲಿಲ್ಲ. ನೋಡಿದ ತಕ್ಷಣ ನಾನು ಬಾಸ್‌ ಅಂತ ಕರೆದೆ ಅದಕ್ಕೆ ಅವರು ಟೈಗರ್‌ ಅಂದು ಶೇಕ್‌ ಹ್ಯಾಂಡ್‌ ಮಾಡಿದರು ಅಷ್ಟೆ ಎಂದು ವಿನೋದ್‌ ಪ್ರಭಾಕರ್‌ ಹೇಳಿದ್ದಾರೆ.

ನಾನು ದರ್ಶನ್‌ ಭೇಟಿಯಾಗಿ 4 ತಿಂಗಳು ಕಳೆದಿವೆ. ಅವರ ಹುಟ್ಟುಹಬ್ಬದ ನಂತರ ಒಂದು ಪಾರ್ಟಿಯಲ್ಲಿ ಸಿಕ್ಕಿದ್ವಿ ಅಷ್ಟೇ. ನಾನು ಟಿವಿಯಲ್ಲಿ ನೋಡಿಯೇ ಎಲ್ಲವನ್ನೂ ತಿಳಿದಿದ್ದು, ನಿಮಗೆಷ್ಟು ಗೊತ್ತಿದ್ದಿಯೋ ನನಗೂ ಅಷ್ಟೆ ಗೊತ್ತಿರೋದು ಎಂದರು.

ಇಷ್ಟು ದಿನ ದರ್ಶನ್‌ ಅವರನ್ನು ನೋಡಲು ಬಂದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವ್ರು ಟೀಕೆ ಮಾಡಿದ್ರು, ಈ ಬಗ್ಗೆಯೂ ಮಾತನಾಡಿದ ಅವರು, ಅನ್ನಪೂರ್ಣೇಶ್ವರಿ ಠಾಣೆ ಬಳಿ ಬೇಟಿಯಾಗಲೂ ತೆರಳಿದ್ದೆ, ಆದರೆ ಅದು ಸಾಧ್ಯವಾಗಲಿಲ್ಲ. ಆಗಾಗಿ ಇಂದು ಇಲ್ಲಿ ಬಂದು ಭೇಟಿಯಾಗಿದ್ದೇನೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

2 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

4 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

5 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

5 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

8 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

11 hours ago