Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಪರ ವಕೀಲರು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ 57ನೇ ಸಿಸಿಹೆಚ್‌ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿದೆ.

ಡಿ.13ರಂದು ಹೈಕೋರ್ಟ್‌, ದರ್ಶನ್‌ ಸೇರಿ ಏಳು ಮಂದಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ವ್ಯಾಪ್ತಿ ಬಿಟ್ಟಯ ತೆರಳುಕೂಡದ ಎಂಬ ಷರತ್ತು ಕೂಡ ಇದರಲ್ಲಿ ಒಳಗೊಂಡಿದೆ. ಈ ಹಿನ್ನೆಲೆಯಲ್ಲಿ ಅನುಮತಿ ಕೋರಿ ದರ್ಶನ್‌ ಕೋರ್ಟ್‌ ಮೋರೆ ಹೋಗಿದ್ದಾರೆ.

 

 

Tags:
error: Content is protected !!