ರಾಜ್ಯ

ಹಾಸನಾಂಬೆ ದರ್ಶನಕ್ಕೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ: ಇಲ್ಲಿದೆ ವೇಳಾಪಟ್ಟಿ

ಹಾಸನ: ಹಾಸನಾಂಬ ದೇವಾಲಯದ ಬಾಗಿಲನ್ನು ನಿನ್ನೆ (ಅಕ್ಟೋಬರ್.24)‌ ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಆದರೆ, ದೇವಿಯ ದರ್ಶನಕ್ಕೆ ಇಂದಿನಿಂದ(ಅ.25) ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿಯೇ ಜನರ ದಂಡು ಹರಿದು ಬಂದಿದೆ.

ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗಿನ ಜಾವ 4 ಗಂಟೆಯಿಂದಲೇ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹೀಗಾಗಿ ಶಕ್ತಿ ದೇವತೆಯ ದರ್ಶನಕ್ಕೆ ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಅಲ್ಲದೇ ಇಂದು ಶುಕ್ರವಾರ ಆಗಿರುವುದರಿಂದ ದೇವಿಯ ದರ್ಶನಕ್ಕೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಜನರ ದಂಡೇ ಹರಿದು ಬಂದಿದೆ.

ಹಾಸನಾಂಬೆಯ ದರ್ಶನದ ವಿವರ
26-10-2024(ಶನಿವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
27-10-2024(ಭಾನುವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
28-10-2024(ಸೋಮವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
29-10-2024(ಮಂಗಳವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
30-10-2024(ಬುಧವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
31-10-2024(ಗುರುವಾರ)ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
1-11-2024(ಶುಕ್ರವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
2-11-2024(ಶನಿವಾರ) ಬೆಳಿಗ್ಗೆ 4 ರಿಂದ ಸಂಜೆ 7 ಗಂಟೆಯವರೆಗೆ, ನಂತರ ರಾತ್ರಿ 11 ರಿಂದ ಬೆಳಗಿನ ಜಾವ 6 ಗಂಟೆಯವರೆಗೆ.
3-11-2024(ಭಾನುವಾರ) ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ. ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬೆಯ ಗರ್ಭಗುಡಿಯನ್ನು ಮುಚ್ಚಲಾಗುವುದು.

ದರ್ಶನಕ್ಕೆ ಕ್ಯೂರ್‌ ಕೋಡ್‌ ವ್ಯವಸ್ಥೆ
ಸರ್ಕಾರದ ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಹಾಸನಾಂಬ ದರ್ಶನಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಅದೇ ನೀರಿಕ್ಷೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸುಮಾರು 10 ಕಿ.ಮೀ.ಉದ್ದದ ಬ್ಯಾರಿಕೇಡ್‌ ವ್ಯವಸ್ಥೆ ಮಾಡಿ, ಸರತಿ ಸಾಲಿನಲ್ಲಿ ನಿಲ್ಲುವವರಿಗೆ ನೆರಳಿನ ವ್ಯವಸ್ಥೆ ಹಾಗೂ ಗಣ್ಯರು ಮತ್ತು ಅತಿ ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸುಗಮವಾಗಿ ಹಾಸನಾಂಬ ದೇವಿಯ ದರ್ಶನ ಮಾಡಲು ಕ್ಯೂರ್‌ ಕೋಡ್‌ ವ್ಯವಸ್ಥೆ ಮಾಡಲಾಗಿದ್ದು, ವಿಶೇಷ ದರ್ಶನಕ್ಕೆ ಪಾಸ್‌ ಪಡೆಯುವವರು ಕ್ಯೂರ್‌ ಕೋಡ್‌ ಮೂಲಕ ಹಣ ಪಾವತಿಸಿ ವಿಶೇಷ ಪಾಸ್‌ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ನೇರ ದರ್ಶನಕ್ಕೆ 1000 ರೂ.ಟಿಕೆಟ್‌ ದರ
ನೇರವಾಗಿ ಹಾಸನಾಂಬೆಯ ದರ್ಶನವನ್ನು ಪಡೆಯ ಬಯಸುವವರಿಗೆ 1000 ರೂ. ದರದ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

3 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

3 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

3 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

4 hours ago