ಹಾಸನ: ಹಾಸನಾಂಬ ದೇವಾಲಯದ ಬಾಗಿಲನ್ನು ನಿನ್ನೆ (ಅಕ್ಟೋಬರ್.24) ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಆದರೆ, ದೇವಿಯ ದರ್ಶನಕ್ಕೆ ಇಂದಿನಿಂದ(ಅ.25) ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿಯೇ ಜನರ ದಂಡು ಹರಿದು ಬಂದಿದೆ.
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗಿನ ಜಾವ 4 ಗಂಟೆಯಿಂದಲೇ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹೀಗಾಗಿ ಶಕ್ತಿ ದೇವತೆಯ ದರ್ಶನಕ್ಕೆ ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಅಲ್ಲದೇ ಇಂದು ಶುಕ್ರವಾರ ಆಗಿರುವುದರಿಂದ ದೇವಿಯ ದರ್ಶನಕ್ಕೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಜನರ ದಂಡೇ ಹರಿದು ಬಂದಿದೆ.
ಹಾಸನಾಂಬೆಯ ದರ್ಶನದ ವಿವರ
26-10-2024(ಶನಿವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
27-10-2024(ಭಾನುವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
28-10-2024(ಸೋಮವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
29-10-2024(ಮಂಗಳವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
30-10-2024(ಬುಧವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
31-10-2024(ಗುರುವಾರ)ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
1-11-2024(ಶುಕ್ರವಾರ) ಬೆಳಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳಿಕ ಮಧ್ಯಾಹ್ನ 3 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ.
2-11-2024(ಶನಿವಾರ) ಬೆಳಿಗ್ಗೆ 4 ರಿಂದ ಸಂಜೆ 7 ಗಂಟೆಯವರೆಗೆ, ನಂತರ ರಾತ್ರಿ 11 ರಿಂದ ಬೆಳಗಿನ ಜಾವ 6 ಗಂಟೆಯವರೆಗೆ.
3-11-2024(ಭಾನುವಾರ) ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ. ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬೆಯ ಗರ್ಭಗುಡಿಯನ್ನು ಮುಚ್ಚಲಾಗುವುದು.
ದರ್ಶನಕ್ಕೆ ಕ್ಯೂರ್ ಕೋಡ್ ವ್ಯವಸ್ಥೆ
ಸರ್ಕಾರದ ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಹಾಸನಾಂಬ ದರ್ಶನಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಅದೇ ನೀರಿಕ್ಷೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸುಮಾರು 10 ಕಿ.ಮೀ.ಉದ್ದದ ಬ್ಯಾರಿಕೇಡ್ ವ್ಯವಸ್ಥೆ ಮಾಡಿ, ಸರತಿ ಸಾಲಿನಲ್ಲಿ ನಿಲ್ಲುವವರಿಗೆ ನೆರಳಿನ ವ್ಯವಸ್ಥೆ ಹಾಗೂ ಗಣ್ಯರು ಮತ್ತು ಅತಿ ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸುಗಮವಾಗಿ ಹಾಸನಾಂಬ ದೇವಿಯ ದರ್ಶನ ಮಾಡಲು ಕ್ಯೂರ್ ಕೋಡ್ ವ್ಯವಸ್ಥೆ ಮಾಡಲಾಗಿದ್ದು, ವಿಶೇಷ ದರ್ಶನಕ್ಕೆ ಪಾಸ್ ಪಡೆಯುವವರು ಕ್ಯೂರ್ ಕೋಡ್ ಮೂಲಕ ಹಣ ಪಾವತಿಸಿ ವಿಶೇಷ ಪಾಸ್ ಪಡೆಯುವ ವ್ಯವಸ್ಥೆ ಮಾಡಲಾಗಿದೆ.
ನೇರ ದರ್ಶನಕ್ಕೆ 1000 ರೂ.ಟಿಕೆಟ್ ದರ
ನೇರವಾಗಿ ಹಾಸನಾಂಬೆಯ ದರ್ಶನವನ್ನು ಪಡೆಯ ಬಯಸುವವರಿಗೆ 1000 ರೂ. ದರದ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…