ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅಕ್ಟೋಬರ್.9ಕ್ಕೆ ಕಾಯ್ದಿರಿಸಿದೆ.
ನಟ ದರ್ಶನ್ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಕೆಲ ಸವಲತ್ತು ನೀಡುವಂತೆ ಕೋರ್ಟ್ ಆದೇಶ ನೀಡಿದ್ದರೂ ಜೈಲಾಧಿಕಾರಿಗಳು ಯಾವುದೇ ಸವಲತ್ತು ನೀಡಿಲ್ಲ.
ಇದನ್ನು ಓದಿ : ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ
ಈ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ದರ್ಶನ್ಗೆ ಯಾವುದೇ ಸವಲತ್ತು ನೀಡಲಾಗಿಲ್ಲ ಎಂಬ ಬಗ್ಗೆ ಖುದ್ದು ಜೈಲಿನಲ್ಲಿ ಪರಿಶೀಲನೆ ನಡೆಸುವಂತೆ ಕೋರಿ ಸಿಆರ್ಪಿಸಿ ಸೆಕ್ಷನ್ 310 ರ ಅಡಿ ದರ್ಶನ್ ಪರ ವಕೀಲ ಸುನೀಲ್ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ವಿಚಾರಣೆಯನ್ನು ಅಕ್ಟೋಬರ್.9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…