ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ 13 ವರ್ಷಗಳ ಬಳಿಕ ಮತ್ತೆ ಜೈಲು ಸೇರಿದ್ದಾರೆ. ಪೊಲೀಸ್ ಕಸ್ಟಡಿ ವಿಚಾರಣೆ ಶನಿವಾರ(ಜೂ.22) ಮುಗಿದ ಹಿನ್ನೆಲೆ ದರ್ಶನ್ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 13ದಿನಗಳ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ.
ಹತ್ಯೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ದರ್ಶನ್ ಪೊಲೀಸ್ ಜೀಪ್ನಲ್ಲಿ ಪರಪ್ಪನ ಅಗ್ರಹಾರದತ್ತ ಪ್ರಯಾಣ ಬೆಳೆಸಿದ ವೇಳೆ ಪೊಲೀಸ್ ಚೀಪ್ನಲ್ಲೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳತ್ತ ಕೈ ಬೀಸಿ ಮಾತನಾಡಿದ್ದಾರೆ. ನನಗೆ ಏನು ಆಗುವುದಿಲ್ಲ, ಹೆದರಬೇಡಿ ಎಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.
ಪೊಲೀಸ್ ಚೀಪ್ದಲ್ಲಿ ದರ್ಶನ್ ಇದ್ದಾಗ, ಹೊರಗೆ ನರೆದಿದ್ದ ಅವರ ಅಭಿಮಾನಿಗಳತ್ತ ಕೈಬೀಸಿದ ಅವರು, ಪ್ಲೈಯಿಂಗ್ ಕಿಸ್ ಕೊಟ್ಟು ನಾನು ಆರಾಮಾಗಿದ್ದೇನೆ. ನನಗೆ ಏನು ಆಗಲ್ಲ ಹೆದರಬೇಡಿ ಎಂದಿದ್ದಾರೆ.
ದರ್ಶನ್ ಹತ್ಯೆ ಪ್ರಕರಣದಲ್ಲಿ ಬಂಧನವಾದ ಬಳಿಕ ಅವರ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಇದೇ ವೇಳೇ ದಾಸ ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ. ಸದ್ಯ ಪೊಲೀಸ್ ಜೀಪ್ನಲ್ಲಿ ದರ್ಶನ್ ಪ್ರತಿಕ್ರಿಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…