ರಾಜ್ಯ

ದಾಸನ ಕೈದಿ ಸಂಖ್ಯೆ ಇದೀಗ ಲಕ್ಕಿ ನಂಬರ್!‌  ಗಾಡಿಗೆ ರಿಜಸ್ಟರ್‌ ಮಾಡಿಸಲು ಮುಂದಾದ ದರ್ಶನ್‌ ಅಭಿಮಾನಿ

ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್‌ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್‌ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್‌ ಸೋಶಿಯಲ್‌ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ.

ಹೌದು. ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ‌ ನಟ ದರ್ಶನ್‌ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್‌ 6106
ನನಗೆ ಲಕ್ಕಿ ನಂಬರ್‌ ಎಂದಿದ್ದಾರೆ.  ಜೊತೆಗೆ ಇದೇ ನಂಬರ್‌ ನಮ್ಮ ಗಾಡಿ ಮೇಲೆ ಇರುತ್ತದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಆರ್‌ಟಿಓ ಕಚೇರಿಯಲ್ಲಿ ಕೈದಿ ನಂಬರ್‌ 6106 ನ್ನು ರಿಜಿಸ್ಟರ್‌ ಮಾಡಿಸಲು ಮುಂದಾಗಿದ್ದಾರೆ.

ದರ್ಶನ್‌ ನೆನೆದು ಕಣ್ಣೀರಿಟ್ಟ ಅಭಿಮಾನಿ ಧನುಷ್‌, ದರ್ಶನ್  ಬಿಡುಗಡೆಗೆ ಹರಕೆ ಹೊತ್ತು, ನಾಡ ದೇವತೆ ಚಾಮುಂಡೇಶ್ವರಿಯಲ್ಲಿ 101 ತೆಂಗಿನಕಾಯಿ ಒಡೆಯುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.

ನಮ್ಮ ಬಾಸ್‌ ಏನು ತಪ್ಪು ಮಾಡಿಲ್ಲ. ನಮ್ಮ ಬಾಸ್‌ನ್ನು ನಾವು ಬಿಟ್ಟುಕೊಡುವುದಿಲ್ಲ. ಕಾನೂನು ಎಲ್ಲರಿಗೆ ಒಂದೇ. ತಪ್ಪು ಮಾಡಿಲ್ಲ ಅಂದರೆ ರಾಜಾರೋಷವಾಗಿ ಬಿಡುಗಡೆಯಾಗಿ ಬರುತ್ತಾರೆ ಎಂದಿದ್ದಾರೆ ಅಭಿಮಾನಿ ಧನುಷ್.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

3 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

6 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

6 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago