ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್ಗೆ ನೀಡಲಾಗಿರುವ ಕೈದಿ ನಂಬರ್ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್ ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ.
ಹೌದು. ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ನಟ ದರ್ಶನ್ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್ 6106
ನನಗೆ ಲಕ್ಕಿ ನಂಬರ್ ಎಂದಿದ್ದಾರೆ. ಜೊತೆಗೆ ಇದೇ ನಂಬರ್ ನಮ್ಮ ಗಾಡಿ ಮೇಲೆ ಇರುತ್ತದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಆರ್ಟಿಓ ಕಚೇರಿಯಲ್ಲಿ ಕೈದಿ ನಂಬರ್ 6106 ನ್ನು ರಿಜಿಸ್ಟರ್ ಮಾಡಿಸಲು ಮುಂದಾಗಿದ್ದಾರೆ.
ದರ್ಶನ್ ನೆನೆದು ಕಣ್ಣೀರಿಟ್ಟ ಅಭಿಮಾನಿ ಧನುಷ್, ದರ್ಶನ್ ಬಿಡುಗಡೆಗೆ ಹರಕೆ ಹೊತ್ತು, ನಾಡ ದೇವತೆ ಚಾಮುಂಡೇಶ್ವರಿಯಲ್ಲಿ 101 ತೆಂಗಿನಕಾಯಿ ಒಡೆಯುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.
ನಮ್ಮ ಬಾಸ್ ಏನು ತಪ್ಪು ಮಾಡಿಲ್ಲ. ನಮ್ಮ ಬಾಸ್ನ್ನು ನಾವು ಬಿಟ್ಟುಕೊಡುವುದಿಲ್ಲ. ಕಾನೂನು ಎಲ್ಲರಿಗೆ ಒಂದೇ. ತಪ್ಪು ಮಾಡಿಲ್ಲ ಅಂದರೆ ರಾಜಾರೋಷವಾಗಿ ಬಿಡುಗಡೆಯಾಗಿ ಬರುತ್ತಾರೆ ಎಂದಿದ್ದಾರೆ ಅಭಿಮಾನಿ ಧನುಷ್.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…