ರಾಜ್ಯ

ದಾಸನ ಕೈದಿ ಸಂಖ್ಯೆ ಇದೀಗ ಲಕ್ಕಿ ನಂಬರ್!‌  ಗಾಡಿಗೆ ರಿಜಸ್ಟರ್‌ ಮಾಡಿಸಲು ಮುಂದಾದ ದರ್ಶನ್‌ ಅಭಿಮಾನಿ

ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್‌ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್‌ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್‌ ಸೋಶಿಯಲ್‌ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ.

ಹೌದು. ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ‌ ನಟ ದರ್ಶನ್‌ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್‌ 6106
ನನಗೆ ಲಕ್ಕಿ ನಂಬರ್‌ ಎಂದಿದ್ದಾರೆ.  ಜೊತೆಗೆ ಇದೇ ನಂಬರ್‌ ನಮ್ಮ ಗಾಡಿ ಮೇಲೆ ಇರುತ್ತದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಆರ್‌ಟಿಓ ಕಚೇರಿಯಲ್ಲಿ ಕೈದಿ ನಂಬರ್‌ 6106 ನ್ನು ರಿಜಿಸ್ಟರ್‌ ಮಾಡಿಸಲು ಮುಂದಾಗಿದ್ದಾರೆ.

ದರ್ಶನ್‌ ನೆನೆದು ಕಣ್ಣೀರಿಟ್ಟ ಅಭಿಮಾನಿ ಧನುಷ್‌, ದರ್ಶನ್  ಬಿಡುಗಡೆಗೆ ಹರಕೆ ಹೊತ್ತು, ನಾಡ ದೇವತೆ ಚಾಮುಂಡೇಶ್ವರಿಯಲ್ಲಿ 101 ತೆಂಗಿನಕಾಯಿ ಒಡೆಯುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.

ನಮ್ಮ ಬಾಸ್‌ ಏನು ತಪ್ಪು ಮಾಡಿಲ್ಲ. ನಮ್ಮ ಬಾಸ್‌ನ್ನು ನಾವು ಬಿಟ್ಟುಕೊಡುವುದಿಲ್ಲ. ಕಾನೂನು ಎಲ್ಲರಿಗೆ ಒಂದೇ. ತಪ್ಪು ಮಾಡಿಲ್ಲ ಅಂದರೆ ರಾಜಾರೋಷವಾಗಿ ಬಿಡುಗಡೆಯಾಗಿ ಬರುತ್ತಾರೆ ಎಂದಿದ್ದಾರೆ ಅಭಿಮಾನಿ ಧನುಷ್.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago