ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್ಗೆ ನೀಡಲಾಗಿರುವ ಕೈದಿ ನಂಬರ್ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್ ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ.
ಹೌದು. ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ನಟ ದರ್ಶನ್ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್ 6106
ನನಗೆ ಲಕ್ಕಿ ನಂಬರ್ ಎಂದಿದ್ದಾರೆ. ಜೊತೆಗೆ ಇದೇ ನಂಬರ್ ನಮ್ಮ ಗಾಡಿ ಮೇಲೆ ಇರುತ್ತದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಆರ್ಟಿಓ ಕಚೇರಿಯಲ್ಲಿ ಕೈದಿ ನಂಬರ್ 6106 ನ್ನು ರಿಜಿಸ್ಟರ್ ಮಾಡಿಸಲು ಮುಂದಾಗಿದ್ದಾರೆ.
ದರ್ಶನ್ ನೆನೆದು ಕಣ್ಣೀರಿಟ್ಟ ಅಭಿಮಾನಿ ಧನುಷ್, ದರ್ಶನ್ ಬಿಡುಗಡೆಗೆ ಹರಕೆ ಹೊತ್ತು, ನಾಡ ದೇವತೆ ಚಾಮುಂಡೇಶ್ವರಿಯಲ್ಲಿ 101 ತೆಂಗಿನಕಾಯಿ ಒಡೆಯುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.
ನಮ್ಮ ಬಾಸ್ ಏನು ತಪ್ಪು ಮಾಡಿಲ್ಲ. ನಮ್ಮ ಬಾಸ್ನ್ನು ನಾವು ಬಿಟ್ಟುಕೊಡುವುದಿಲ್ಲ. ಕಾನೂನು ಎಲ್ಲರಿಗೆ ಒಂದೇ. ತಪ್ಪು ಮಾಡಿಲ್ಲ ಅಂದರೆ ರಾಜಾರೋಷವಾಗಿ ಬಿಡುಗಡೆಯಾಗಿ ಬರುತ್ತಾರೆ ಎಂದಿದ್ದಾರೆ ಅಭಿಮಾನಿ ಧನುಷ್.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…