ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್ಗೆ ನೀಡಲಾಗಿರುವ ಕೈದಿ ನಂಬರ್ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್ ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ.
ಹೌದು. ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ನಟ ದರ್ಶನ್ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್ 6106
ನನಗೆ ಲಕ್ಕಿ ನಂಬರ್ ಎಂದಿದ್ದಾರೆ. ಜೊತೆಗೆ ಇದೇ ನಂಬರ್ ನಮ್ಮ ಗಾಡಿ ಮೇಲೆ ಇರುತ್ತದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಆರ್ಟಿಓ ಕಚೇರಿಯಲ್ಲಿ ಕೈದಿ ನಂಬರ್ 6106 ನ್ನು ರಿಜಿಸ್ಟರ್ ಮಾಡಿಸಲು ಮುಂದಾಗಿದ್ದಾರೆ.
ದರ್ಶನ್ ನೆನೆದು ಕಣ್ಣೀರಿಟ್ಟ ಅಭಿಮಾನಿ ಧನುಷ್, ದರ್ಶನ್ ಬಿಡುಗಡೆಗೆ ಹರಕೆ ಹೊತ್ತು, ನಾಡ ದೇವತೆ ಚಾಮುಂಡೇಶ್ವರಿಯಲ್ಲಿ 101 ತೆಂಗಿನಕಾಯಿ ಒಡೆಯುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.
ನಮ್ಮ ಬಾಸ್ ಏನು ತಪ್ಪು ಮಾಡಿಲ್ಲ. ನಮ್ಮ ಬಾಸ್ನ್ನು ನಾವು ಬಿಟ್ಟುಕೊಡುವುದಿಲ್ಲ. ಕಾನೂನು ಎಲ್ಲರಿಗೆ ಒಂದೇ. ತಪ್ಪು ಮಾಡಿಲ್ಲ ಅಂದರೆ ರಾಜಾರೋಷವಾಗಿ ಬಿಡುಗಡೆಯಾಗಿ ಬರುತ್ತಾರೆ ಎಂದಿದ್ದಾರೆ ಅಭಿಮಾನಿ ಧನುಷ್.
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…