ರಾಜ್ಯ

ನ.11ಕ್ಕೆ ಆರ್.ಎಸ್.ಎಸ್ ವಿರುದ್ಧ ʼದಸಂಸ ಪ್ರತಿರೋಧ ಸಮಾವೇಶʼ

ಮೈಸೂರು : ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ನ.11 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆರ್.ಎಸ್.ಎಸ್ ವಿರುದ್ಧ ಡಿ.ಎಸ್.ಎಸ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತಮಾನೋತ್ಸವದ ಉನ್ಮಾದದ ಅಮಲಿನಲ್ಲಿ ತೇಲುತ್ತಿರುವ ಸನಾತನಿಗಳು ಸಂವಿಧಾನ-ಪ್ರಜಾಪ್ರಭುತ್ವ ಹಾಗೂ ಅಂಬೇಡ್ಕರ್‌ ಅವರ ವ್ಯಕ್ತಿ-ವ್ಯಕ್ತಿತ್ವದ ಮೇಲೆ ಒಮ್ಮೆಲೆ ತೀವ್ರ ದಾಳಿಗೆ ಮುಂದಾಗಿದ್ದಾರೆ. ಮುಸ್ಲಿಮರು, ದಲಿತರು, ಕ್ರೈಸ್ತರು ನಂತರದಲ್ಲಿ ಹಿಂದುಳಿದ ಶೂದ್ರ ಸಮುದಾಯಗಳು ಇವರ ಮುಂದಿನ ಗುರಿಯಾಗಿವೆ.

ಇದನ್ನು ಓದಿ: ಮಂಡ್ಯ | ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ; ಭೂಸ್ವಾಧೀನಕ್ಕೆ ಎಚ್‌ಡಿಕೆ ಸೂಚನೆ

ಒಟ್ಟಾರೆ, ಆರೆಸ್ಸೆಸ್-ಬಿಜೆಪಿಗಳಿಗೆ ಮತ್ತೆ ‘ಮನುಸ್ಮೃತಿ’ ಜಾರಿಗೆ ಬರಬೇಕಿದೆ. ಚಾತುರ್ವರ್ಣ ಪದ್ಧತಿಯಂತೆ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳು ಇವರ ಜೀತದಾಳುಗಳಾಗಬೇಕಿದೆ. ಈ ಕಾರಣಕ್ಕಾಗಿಯೇ, ಆರೆಸ್ಸೆಸ್ ಹೇಳಿದಂತೆ ಕೇಳುವ ರಾಜಕಾರಣಿಗಳು ಇವರಿಗೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿ ಧರ್ಮದ ವಿರುದ್ಧ ಕಲಹ ಸೃಷ್ಟಿಸಿ ಬೆಂಕಿ ಹೆಚ್ಚುತ್ತಿರುವ ಹಾಗೂ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಕಂಟಕಪ್ರಾಯವಾಗಿ ಬ್ರಾಹ್ಮಣ್ಯದ ಪಾರಮ್ಯವನ್ನು ಮೆರೆಸಲು ಮುಂದಾಗಿರುವ ಆರ್ ಎಸ್ ಎಸ್ ಹಾಗೂ ಬಿಜೆಪಿಯ ಕುತಂತ್ರವನ್ನು ಹಿಮ್ಮಟ್ಟಿಸುವುದು ಮತ್ತು ಸಂವಿಧಾನದ ರಕ್ಷಣೆಗೆ ಒಗ್ಗಟ್ಟಾಗುವುದು ಸಮಾವೇಶದ ಉದ್ದೇಶವಾಗಿದೆ. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ದಸಂಸ ಹಿರಿಯ ಮುಖಂಡರಾದ ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಎನ್.ವೆಂಕಟೇಶ್, ಇಂದೂಧರ ಹೊನ್ನಾಪುರ, ಎನ್.ಮುನಿಸ್ವಾಮಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

52 mins ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

1 hour ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

2 hours ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

15 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

15 hours ago