ರಾಜ್ಯ

ನ.11ಕ್ಕೆ ಆರ್.ಎಸ್.ಎಸ್ ವಿರುದ್ಧ ʼದಸಂಸ ಪ್ರತಿರೋಧ ಸಮಾವೇಶʼ

ಮೈಸೂರು : ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ನ.11 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆರ್.ಎಸ್.ಎಸ್ ವಿರುದ್ಧ ಡಿ.ಎಸ್.ಎಸ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತಮಾನೋತ್ಸವದ ಉನ್ಮಾದದ ಅಮಲಿನಲ್ಲಿ ತೇಲುತ್ತಿರುವ ಸನಾತನಿಗಳು ಸಂವಿಧಾನ-ಪ್ರಜಾಪ್ರಭುತ್ವ ಹಾಗೂ ಅಂಬೇಡ್ಕರ್‌ ಅವರ ವ್ಯಕ್ತಿ-ವ್ಯಕ್ತಿತ್ವದ ಮೇಲೆ ಒಮ್ಮೆಲೆ ತೀವ್ರ ದಾಳಿಗೆ ಮುಂದಾಗಿದ್ದಾರೆ. ಮುಸ್ಲಿಮರು, ದಲಿತರು, ಕ್ರೈಸ್ತರು ನಂತರದಲ್ಲಿ ಹಿಂದುಳಿದ ಶೂದ್ರ ಸಮುದಾಯಗಳು ಇವರ ಮುಂದಿನ ಗುರಿಯಾಗಿವೆ.

ಇದನ್ನು ಓದಿ: ಮಂಡ್ಯ | ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ; ಭೂಸ್ವಾಧೀನಕ್ಕೆ ಎಚ್‌ಡಿಕೆ ಸೂಚನೆ

ಒಟ್ಟಾರೆ, ಆರೆಸ್ಸೆಸ್-ಬಿಜೆಪಿಗಳಿಗೆ ಮತ್ತೆ ‘ಮನುಸ್ಮೃತಿ’ ಜಾರಿಗೆ ಬರಬೇಕಿದೆ. ಚಾತುರ್ವರ್ಣ ಪದ್ಧತಿಯಂತೆ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳು ಇವರ ಜೀತದಾಳುಗಳಾಗಬೇಕಿದೆ. ಈ ಕಾರಣಕ್ಕಾಗಿಯೇ, ಆರೆಸ್ಸೆಸ್ ಹೇಳಿದಂತೆ ಕೇಳುವ ರಾಜಕಾರಣಿಗಳು ಇವರಿಗೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿ ಧರ್ಮದ ವಿರುದ್ಧ ಕಲಹ ಸೃಷ್ಟಿಸಿ ಬೆಂಕಿ ಹೆಚ್ಚುತ್ತಿರುವ ಹಾಗೂ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಕಂಟಕಪ್ರಾಯವಾಗಿ ಬ್ರಾಹ್ಮಣ್ಯದ ಪಾರಮ್ಯವನ್ನು ಮೆರೆಸಲು ಮುಂದಾಗಿರುವ ಆರ್ ಎಸ್ ಎಸ್ ಹಾಗೂ ಬಿಜೆಪಿಯ ಕುತಂತ್ರವನ್ನು ಹಿಮ್ಮಟ್ಟಿಸುವುದು ಮತ್ತು ಸಂವಿಧಾನದ ರಕ್ಷಣೆಗೆ ಒಗ್ಗಟ್ಟಾಗುವುದು ಸಮಾವೇಶದ ಉದ್ದೇಶವಾಗಿದೆ. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ದಸಂಸ ಹಿರಿಯ ಮುಖಂಡರಾದ ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಎನ್.ವೆಂಕಟೇಶ್, ಇಂದೂಧರ ಹೊನ್ನಾಪುರ, ಎನ್.ಮುನಿಸ್ವಾಮಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

2 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

2 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

5 hours ago