ಮೈಸೂರು : ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ನ.11 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆರ್.ಎಸ್.ಎಸ್ ವಿರುದ್ಧ ಡಿ.ಎಸ್.ಎಸ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತಮಾನೋತ್ಸವದ ಉನ್ಮಾದದ ಅಮಲಿನಲ್ಲಿ ತೇಲುತ್ತಿರುವ ಸನಾತನಿಗಳು ಸಂವಿಧಾನ-ಪ್ರಜಾಪ್ರಭುತ್ವ ಹಾಗೂ ಅಂಬೇಡ್ಕರ್ ಅವರ ವ್ಯಕ್ತಿ-ವ್ಯಕ್ತಿತ್ವದ ಮೇಲೆ ಒಮ್ಮೆಲೆ ತೀವ್ರ ದಾಳಿಗೆ ಮುಂದಾಗಿದ್ದಾರೆ. ಮುಸ್ಲಿಮರು, ದಲಿತರು, ಕ್ರೈಸ್ತರು ನಂತರದಲ್ಲಿ ಹಿಂದುಳಿದ ಶೂದ್ರ ಸಮುದಾಯಗಳು ಇವರ ಮುಂದಿನ ಗುರಿಯಾಗಿವೆ.
ಇದನ್ನು ಓದಿ: ಮಂಡ್ಯ | ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ; ಭೂಸ್ವಾಧೀನಕ್ಕೆ ಎಚ್ಡಿಕೆ ಸೂಚನೆ
ಒಟ್ಟಾರೆ, ಆರೆಸ್ಸೆಸ್-ಬಿಜೆಪಿಗಳಿಗೆ ಮತ್ತೆ ‘ಮನುಸ್ಮೃತಿ’ ಜಾರಿಗೆ ಬರಬೇಕಿದೆ. ಚಾತುರ್ವರ್ಣ ಪದ್ಧತಿಯಂತೆ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳು ಇವರ ಜೀತದಾಳುಗಳಾಗಬೇಕಿದೆ. ಈ ಕಾರಣಕ್ಕಾಗಿಯೇ, ಆರೆಸ್ಸೆಸ್ ಹೇಳಿದಂತೆ ಕೇಳುವ ರಾಜಕಾರಣಿಗಳು ಇವರಿಗೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿ ಧರ್ಮದ ವಿರುದ್ಧ ಕಲಹ ಸೃಷ್ಟಿಸಿ ಬೆಂಕಿ ಹೆಚ್ಚುತ್ತಿರುವ ಹಾಗೂ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಕಂಟಕಪ್ರಾಯವಾಗಿ ಬ್ರಾಹ್ಮಣ್ಯದ ಪಾರಮ್ಯವನ್ನು ಮೆರೆಸಲು ಮುಂದಾಗಿರುವ ಆರ್ ಎಸ್ ಎಸ್ ಹಾಗೂ ಬಿಜೆಪಿಯ ಕುತಂತ್ರವನ್ನು ಹಿಮ್ಮಟ್ಟಿಸುವುದು ಮತ್ತು ಸಂವಿಧಾನದ ರಕ್ಷಣೆಗೆ ಒಗ್ಗಟ್ಟಾಗುವುದು ಸಮಾವೇಶದ ಉದ್ದೇಶವಾಗಿದೆ. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ದಸಂಸ ಹಿರಿಯ ಮುಖಂಡರಾದ ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಎನ್.ವೆಂಕಟೇಶ್, ಇಂದೂಧರ ಹೊನ್ನಾಪುರ, ಎನ್.ಮುನಿಸ್ವಾಮಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…