ಮೈಸೂರು : ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ನ.11 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆರ್.ಎಸ್.ಎಸ್ ವಿರುದ್ಧ ಡಿ.ಎಸ್.ಎಸ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತಮಾನೋತ್ಸವದ ಉನ್ಮಾದದ ಅಮಲಿನಲ್ಲಿ ತೇಲುತ್ತಿರುವ ಸನಾತನಿಗಳು ಸಂವಿಧಾನ-ಪ್ರಜಾಪ್ರಭುತ್ವ ಹಾಗೂ ಅಂಬೇಡ್ಕರ್ ಅವರ ವ್ಯಕ್ತಿ-ವ್ಯಕ್ತಿತ್ವದ ಮೇಲೆ ಒಮ್ಮೆಲೆ ತೀವ್ರ ದಾಳಿಗೆ ಮುಂದಾಗಿದ್ದಾರೆ. ಮುಸ್ಲಿಮರು, ದಲಿತರು, ಕ್ರೈಸ್ತರು ನಂತರದಲ್ಲಿ ಹಿಂದುಳಿದ ಶೂದ್ರ ಸಮುದಾಯಗಳು ಇವರ ಮುಂದಿನ ಗುರಿಯಾಗಿವೆ.
ಇದನ್ನು ಓದಿ: ಮಂಡ್ಯ | ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ; ಭೂಸ್ವಾಧೀನಕ್ಕೆ ಎಚ್ಡಿಕೆ ಸೂಚನೆ
ಒಟ್ಟಾರೆ, ಆರೆಸ್ಸೆಸ್-ಬಿಜೆಪಿಗಳಿಗೆ ಮತ್ತೆ ‘ಮನುಸ್ಮೃತಿ’ ಜಾರಿಗೆ ಬರಬೇಕಿದೆ. ಚಾತುರ್ವರ್ಣ ಪದ್ಧತಿಯಂತೆ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳು ಇವರ ಜೀತದಾಳುಗಳಾಗಬೇಕಿದೆ. ಈ ಕಾರಣಕ್ಕಾಗಿಯೇ, ಆರೆಸ್ಸೆಸ್ ಹೇಳಿದಂತೆ ಕೇಳುವ ರಾಜಕಾರಣಿಗಳು ಇವರಿಗೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿ ಧರ್ಮದ ವಿರುದ್ಧ ಕಲಹ ಸೃಷ್ಟಿಸಿ ಬೆಂಕಿ ಹೆಚ್ಚುತ್ತಿರುವ ಹಾಗೂ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಕಂಟಕಪ್ರಾಯವಾಗಿ ಬ್ರಾಹ್ಮಣ್ಯದ ಪಾರಮ್ಯವನ್ನು ಮೆರೆಸಲು ಮುಂದಾಗಿರುವ ಆರ್ ಎಸ್ ಎಸ್ ಹಾಗೂ ಬಿಜೆಪಿಯ ಕುತಂತ್ರವನ್ನು ಹಿಮ್ಮಟ್ಟಿಸುವುದು ಮತ್ತು ಸಂವಿಧಾನದ ರಕ್ಷಣೆಗೆ ಒಗ್ಗಟ್ಟಾಗುವುದು ಸಮಾವೇಶದ ಉದ್ದೇಶವಾಗಿದೆ. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ದಸಂಸ ಹಿರಿಯ ಮುಖಂಡರಾದ ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಎನ್.ವೆಂಕಟೇಶ್, ಇಂದೂಧರ ಹೊನ್ನಾಪುರ, ಎನ್.ಮುನಿಸ್ವಾಮಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…