ಬೆಂಗಳೂರು : ಕಳೆದ ಹಲವು ದಿನಗಳಿಂದ ಒಂದಲ್ಲೊಂದು ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದ ನಿಗಮ ಮಂಡಳಿಗೆ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ದಸರಾ, ದೀಪಾವಳಿ ಹಬ್ಬದ ಉಡುಗೊರೆ ಎನ್ನುವಂತೆ ಒಟ್ಟು ೩೯ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಾಕಷ್ಟು ಕಳೆದು ತೂಗಿ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷನಿಷ್ಠರಿಗೆ ಮಣೆ ಹಾಕಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತರು ಹಾಗೂ ಪಕ್ಷಕ್ಕೆ ದುಡಿದವರನ್ನು ಪರಿಗಣಿಸಿ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ನಡೆಯುತ್ತಿರುವ ಬೆನ್ನಲ್ಲೇ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಮುಂಬರುವ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ), ಮಹಾನಗರ ಪಾಲಿಕೆ, ಪುರಸಭೆ ,ಪಟ್ಟಣ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷಕ್ಕೆ ಹೆಚ್ಚಿನ ಸೇವೆ ಸಲ್ಲಿಸಿದ್ದವರಿಗೆ ಸ್ಥಾನ ಮಾನ ನೀಡಲಾಗಿದೆ.
ಇದನ್ನೂ ಓದಿ:-ರಕ್ಷಕ ಮಹಿಷನನ್ನು ರಾಕ್ಷಸನನ್ನಾಗಿಸಿದ ವೈದಿಕರು : ಪೆರಿಯಾರ್ ಚಳವಳಿಗಾರ ಮಣಿ
ನಿಗಮ ಮಂಡಳಿ ನೇಮಕ ಪಟ್ಟಿ ಇಂತಿದೆ
ಶಿವಲೀಲಾ ಕುಲಕರ್ಣಿ: ಕರ್ನಾಟಕ ನಗ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಪಿ. ರಘು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ
ಅರುಣ್ ಪಾಟೀಲ್: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ನಿಗಮ
ಜಗದೀಶ್ ವೊಡ್ನಾಲ್: ಜೈವಿಕ ವೈವಿಧ್ಯ ಮಂಡಳಿ
ಮುರಳಿ ಅಶೋಕ್: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಡಾ. ಮೂರ್ತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ
ಕರ್ನಲ್ ಮಲ್ಲಿಕಾರ್ಜುನ್: ಮಾಜಿ ಸೈನಿಕರ ಕಲ್ಯಾಣ ಮಂಡಳಿ
ಡಾ. ಬಿ. ಸಿ. ಮುದ್ದುಗಂಗಾಧರ್: ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ
ಶರ್ಲೆಟ್ ಪಿಂಟೋ: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ
ಮರಿಯೋಜಿ ರಾವ್: ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ
ಎಂ. ಎ. ಗಫೂರ್: ಕರಾವಳಿ ಅಭಿವೃದ್ಧಿ ಪ್ರಾಧಿಕಾರ
ಕೆ.ಹರೀಶ್ ಕುಮಾರ್: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಎನ್.ಸಂಪಂಗಿ: ಕರ್ನಾಟಕ ಗೋದಾಮು ನಿಗಮ
ಸಯೀದ್ ಅಹಮದ್: ದೇವರಾಜ್ ಅರಸ್ ಟ್ರಕ್ ಟರ್ಮಿನಲ್
ಮಹೇಶ್: ಕಾಡುಗೊಲ್ಲ ಅಭಿವೃದ್ಧಿ ನಿಗಮ
ಮಂಜಪ್ಪ: ಬಯಲುಸೀಮೆ ಅಭಿವೃದ್ಧಿ ಮಂಡಳಿ
ಧರ್ಮಣ್ಣ : ಉಪ್ಪಾರ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
ಅಗಾ ಸುಲ್ತಾನ್: ಕೇಂದ್ರ ಪರಿಹಾರ ಸಮಿತಿ
ಎಸ್.ಜಿ.ನಂಜಯ್ಯ ಮಠ: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
ಆಂಜಪ್ಪ: ಕರ್ನಾಟಕ ಬೀಜ ಅಭಿವೃದ್ಧಿ ನಿಗಮ ಲಿ.,
ನೀಲಕಂಠ ಮುಲ್ಗೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಬಾಬು ಹೊನ್ನ ನಾಯ್ಕ್ : ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಽಕಾರ, ಭದ್ರಾ
ಯುವರಾಜ್ ಕದಮ್: ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಽಕಾರ, ಮಲಪ್ರಭಾ
ಜಮಾದಾರ್ ಅನಿಲ್ ಕುಮಾರ್: ಕರ್ನಾಟಕ ತೊಗರಿ ಅಭಿವೃದ್ಧಿ ನಿಗಮ
ಪ್ರವೀಣ್ ಹರ್ವಾಲ್ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ
ಮಂಜುನಾಥ್ ಪೂಜಾರಿ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ
ಸೈಯದ್ ಮೆಹಮೂದ್ ಚಿಸ್ತಿ: ಕರ್ನಾಟಕ ರಾಜ್ಯ ಬೇಳೆಕಾಳುಗಳ ಅಭಿವೃದ್ಧಿ ಮಂಡಳಿ ಲಿ.,
ಎಂ.ಎಸ್.ಮುತ್ತುರಾಜ್ : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
ನಂಜಪ್ಪ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
ವಿಶ್ವಾಸ ದಾಸ್ : ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ
ಆರ್. ಸತ್ಯನಾರಾಯಣ : ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ
ಗಂಗಾಧರ್ : ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಲಿಮಿಟೆಡ್
ಶಿವಪ್ಪ : ಹಾಸನ ನಗರಾಭಿವೃದ್ಧಿ ಪ್ರಾಧಿಕಾರ
ಬಿ.ಎಸ್. ಕವಲಗಿ: ಕರ್ನಾಟಕ ಲೈಮ್ ಡೆವಲಪ್ಮೆಂಟ್ ಬೋರ್ಡ್
ಶ್ರೀನಿವಾಸ ವೇಲು: ಕುಂಬಾರ ಅಭಿವೃದ್ಧಿ ನಿಗಮ
ಟಿ.ಎಂ. ಶಾಹೀದ್ ತಕ್ಕಿಲ್: ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ
ಚೇತನ್ ಕೆ. ಗೌಡ: ಕರ್ನಾಟಕ ರಾಜ್ಯ ಕೈಮಗ್ಗ ಮೂಲಸೌಕರ್ಯ ಅಭಿವೃದ್ಧಿ (ಪವರ್ ಲೂಮ್ಸ್) ಮಂಡಳಿ
ಶರಣಪ್ಪ ಸಾರದ್ಪುರ್: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ಮಂಡಳಿ
ಲಾವಣ್ಯ ಬಲ್ಲಾಳ್ ಜೈನ್: ಕರ್ನಾಟಕ ಸ್ಟೇಟ್ ಸೀಡ್ ಅಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜೆನ್ಸಿ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…